newsics.com
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಂಬಂದ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು ಪೊಲೀಸರಿಗೆ ಒಂದೊಂದೇ ಭಯಾನ ವಿಚಾರಗಳು ತಿಳಿದುಬರುತ್ತಿವೆ.
ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಹೇಳಿಕೆ ನೀಡಿದ್ದು, ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸರ ವಶದಲ್ಲಿದ್ದಾರೆ. ಇಂದು ಓ ಪ್ರಕಾಶ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಓ ಪ್ರಕಾಶ್ ಪತ್ನಿ ಪಲ್ಲವಿ ಹೇಳಿದ್ದೇನು?
ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇಪದೆ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್ದರು. ಬೆಳಗ್ಗೆಯಿಂದ ಬೇರೆಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.
ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಡಿದೆವು. ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದಾರೆ. ಘಟನೆ ನಂತರ ಸಂಜೆ ಸ್ಥಳೀಯ ಪೊಲೀಸರಿಗೆ ಪಲ್ಲವಿ ಮಾಹಿತಿ ನೀಡಿದ್ದರು.
ಇದೀಗ ಪ್ರಕರಣದಲ್ಲಿ ಪಲ್ಲವಿ ಮೊದಲ ಆರೋಪಿಯಾಗಲಿದ್ದಾರೆ. ಹತ್ಯೆಯಲ್ಲಿ ಮಗಳ ಪಾತ್ರದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಇಬ್ಬರೂ ಪೊಲೀಸ್ ವಶದಲ್ಲಿದ್ದಾರೆ.
ಇನ್ನು ಓಂ ಪ್ರಕಾಶ್ ಘಟನಾ ಸ್ಥಳದಲ್ಲಿ ಚಾಕು ಇದ್ದುದು ಅದರಿಂದಲೇ ಚುಚ್ಚಿ ಸಾಯಿಸಲಾಗಿದೆ ಎಂಬುದು ಕಂಡುಬಂದಿದೆ. ಆದರೆ, ಪಕ್ಕದಲ್ಲಿದ್ದ ಬಾಟಲಿ ಅಡುಗೆ ಎಣ್ಣೆಯದ್ದು ಎಂಬುದು ಖಚಿತವಾಗುತ್ತಿದೆ. ಆದರೆ, ಎರಡು ಚಾಕು ಸಿಕ್ಕಿರುವ ಬಗ್ಗೆ ಇನ್ನೂ ಸತ್ಯಾಂಶ ತಿಳಿದುಬಂದಿಲ್ಲ. ಇದರಲ್ಲಿ ಮಗಳು ಕೃತಿ ಪಾತ್ರವಿದೆಯೋ ಇಲ್ಲವೋ ಎಂಬುದನ್ನು ಖಚಿತ ಮಾಡಬೇಕಿದೆ. ಸದ್ಯ ಚಾಕುಗಳು ಹಾಗೂ ಬಾಟಲಿ ಮೇಲೆ ಇರೋ ಫಿಂಗರ್ ಫ್ರಿಂಟ್ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರ ಹತ್ಯೆ ಪ್ರಕರಣ ಸದ್ಯ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಘಟನೆ ಕುರಿತು ಓಂ ಪ್ರಕಾಶ್ ಪುತ್ರ ದೂರು ನೀಡಿದ್ದಾರೆ.
Pranitha Subhash ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?