newsics.com
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24 ರಂದು ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದೆ. ಹಿಗಾಗಿ ಏಪ್ರಿಲ್ 22 ರಿಂದ ಏಪ್ರಿಲ್ 24 ರ ವರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ.
ಆದ್ದರಿಂದ, ನಾಳೆಯಿಂದ ಏಪ್ರಿಲ್ 24 ರ ನಡುವಣ ಅವಧಿಯಲ್ಲಿ ಮಾದಪ್ಪನ ಸನ್ನಿಧಿಗೆ ಪ್ರವಾಸದ ಯೋಜನೆ ಮಾಡಿದ್ದರೆ ಅಥವಾ ಅಲ್ಲಿ ವಾಸ್ತವ್ಯಕ್ಕೆ ಪ್ಲಾನ್ ಮಾಡುವುದಿದ್ದರೆ ಭಕ್ತರು ಯೋಚಿಸುವುದು ಒಳಿತು.
ಏಪ್ರಿಲ್ 22 ರಿಂದ 24 ರ ವರಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ಥವ್ಯಕ್ಕೆ ನಿಷೇಧ ಹೇರಿ ಮಲೆ ಮಹದೇಶ್ವರ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಸಚಿವ ಸಂಪುಟ ಸಭೆ ಹಿನ್ನಲೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಭಕ್ತರು ಸಹಕಾರ ನೀಡಬೇಕು ಎಂದು ಕಾರ್ಯದರ್ಶಿ ರಘು ಮನವಿ ಮಾಡಿದ್ದಾರೆ. ಭಕ್ತರಲ್ಲಿ ಗೊಂದಲ ಮೂಡದೆ ಇರಲಿ ಎಂದು ಮುಂಚಿತವಾಗಿಯೇ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
GOLD RATE: ಆಭರಣ ಪ್ರಿಯರಿಗೆ ಶಾಕ್: ಮೊದಲ ಬಾರಿಗೆ 9,000 ರೂ ಗಡಿ ದಾಟಿದ ಚಿನ್ನದ ಬೆಲೆ