newsics.com
ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ತಮ್ಮ ಪೋಷಕರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ.ಅದಾಗಿ ಇಪ್ಪತ್ತು ದಿನಗಳ ಮಗಳು ಮದುವೆಯಾಗಿ ನಂತರ ಆರೋಪ ಮಾಡಿ ಆಡಿಯೋವೊಂದನ್ನು ತಂದೆ ಶಿವಕುಮಾರ್ ಭಟ್ ವಾಟ್ಸಾಪ್ ನಲ್ಲಿ ಹರಿಯ ಬಿಟ್ಟಿದ್ದರು.
ವಶೀಕರಣ ಮಾಡಿಸಿ ಮಗಳನ್ನು ಮದುವೆ ಮಾಡಿಸಿದ್ದಾರೆ ಅಂತ ಆರೋಪ ಮಾಡಿದ್ದರು. ಸರಿಗಮಪ ರಿಯಾಲಿಟಿ ಶೋ ಜ್ಯೂರಿ ಹಾಗೂ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಅವರ ಪ್ರೇರಣೆಯಿಂದಲೇ ಈ ಮದುವೆ ನಡೆದಿದೆ ಅಂತ ಪೃಥ್ವಿ ತಂದೆ ಆರೋಪ ಮಾಡಿದ್ದಾರೆ.
ಹಾಯ್ ಅಪ್ಪಾ. ಸಾರಿ ನೀವು ಆಲ್ರೆಡಿ ಎರಡು ದಿನದಿಂದ ಹವ್ಯಕ ಗ್ರುಪ್ಲ್ಲಿ ಮತ್ತೆ ಬೇರೆ ಬೇರೆ ಗ್ರುಪ್ಲ್ಲಿ ನರಹರಿ ದೀಕ್ಷಿತ್ ಸರ್ ಬಗ್ಗೆ ಮತ್ತೆ ನನ್ನ ಬಗ್ಗೆ ಆಡಿಯೋ ಮೆಸೇಜ್ ಎಲ್ಲಾ ಕಳಿಸುತ್ತಿದ್ದಿ. ಈ ವಿಷಯದಲ್ಲಿ ನರಹರಿ ದೀಕ್ಷಿತ್ರದ್ದು ಏನೂ ತಪ್ಪಿಲ್ಲ. ನಾನು ಮೊದಲು ಹೇಳ್ದಂಗೆ, ಈಗಲೂ ಹೇಳ್ತಿದ್ದೀನಿ, ದೀಕ್ಷಿತ್ ಸರ್ದು ಎಂಥದ್ದು ತಪ್ಪಿಲ್ಲ. ಮಾರ್ಚ್ 7ಕ್ಕೆ ದೀಕ್ಷಿತ್ ಸರ್ ಮನೆಗೆ ಬಂದಿದ್ದು, ಈ ವಿಷಯ ಬಗ್ಗೆ ಮಾತ್ನಾಡಿದ್ರು. ಆಗ ನಾನು ಅವರ ಎದುರೇ ಮತ್ತೆ ನಿಮ್ಮಗಳ ಎದುರೇ ನನಗೆ ಅಭಿ ಇಷ್ಟ ಅಂತನೇ ಹೇಳಿದ್ದು.
ಅವತ್ತು ನಿಮ್ಮ ಮೇಲಿನ ಭಯಕ್ಕೆ ನಾನು ಸುಮ್ಮನಾದೆ, ಆದರೆ ನನ್ನ ಮನಸಿನಲ್ಲಿ ಅಭಿ ಇದ್ದರು.ಕಾರ್ಯಕ್ರಮಗಳಿಗೆ ಹೋಗುವುದು ಬೇಡ ಅಂದಿರಿ. ಸಂಗೀತ ಬೇಡ ಅಂತಾ ಹೇಳಿದಿರಿ ಅದಕ್ಕೆ ಭಯಪಟ್ಟು ನಾನೇ ಈ ನಿರ್ಧಾರ ಮಾಡಿರುವುದು. ನಾನು ಮೊದಲು ಹೇಳಿದ ಹಾಗೆ ಈಗಲೂ ಹೇಳುತ್ತಿದ್ದೇನೆ. ನರಹರಿ ದೀಕ್ಷಿತ್ ಸರ್ ಅವರ ತಪ್ಪು ಏನಿಲ್ಲ. ನಮ್ಮ ಮದುವೆಯ ದಿನ ಅವರಿಗೆ ಗೊತ್ತಿರಲಿಲ್ಲ. ಆಮೇಲೆ ನಾನು ಫೋನ್ ಮಾಡಿ ಬರಲು ಹೇಳಿದ್ದು, ಆಮೇಲೆ ಅವರು ನನಗೆ ಅಭಿಗೆ ಆಶೀರ್ವಾದ ಮಾಡಿದರು. ಇದರಲ್ಲಿ ಅವರ ತಪ್ಪಿಲ್ಲ. ನಾನು ಮಾಡಿರುವುದು ಖಂಡಿತಾ ತಪ್ಪು, ಕ್ಷಮಿಸಿ’ ಎಂದು ಪೃಥ್ವಿ ಭಟ್ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ.
ತಂದೆಯ ಆರೋಪಕ್ಕೆ ಮಗಳು ಕೂಡ ಸ್ಪಷ್ಟನೆ ಕೊಟ್ಟಿದ್ದಾಳೆ.