newsics.com
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಉದ್ಯಮಿ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಮಗ ದ್ವಿತೀಯ ಪಿಯು ಪರೀಕ್ಷೆಯಲ್ಲಿ 97% ಅಂಕ ಗಳಿಸಿದ್ದ ಸಂಭ್ರಮಾಚರಣೆ ಮಾಡಲು ಕಾಶ್ಮೀರಕ್ಕೆ ತೆರಳಿದ್ರು. ಅದರೆ ಮಂಜುನಾಥ್ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಮಂಜುನಾಥ್ ಅವರ ತಾಯಿ, ಮಂಜುನಾಥ್ ಹಾಗೂ ಅವರ ಪತ್ನಿ ಶುಕ್ರವಾರ ಕಾಶ್ಮೀರಕ್ಕೆ ತೆರಳಿದ್ದರು. ಅಲ್ಲಿಗೆ ಹೋಗಬೇಡಿ ಅಂತಾ ಹೇಳಿದ್ದೆ. ಆದರೆ ನನ್ನ ಮನವೊಲಿಸಿ ಕಾಶ್ಮೀರಕ್ಕೆ ತೆರಳಿದ್ದರು.
ಮೊನ್ನೆ ಕಾಲ್ ಮಾಡಿದ್ದ ಮಂಜುನಾಥ್, ರಿಮೋಟ್ ಪ್ರದೇಶದಲ್ಲಿ ವಿಹಾರ ನಡೆಸುತ್ತಿರುವುದಾಗಿ ಹೇಳಿದ್ದರು.ನಿನ್ನೆ ಟಿವಿ ವೀಕ್ಷಿಸುತ್ತಿರುವಾಗ ಈ ಸುದ್ದಿ ಸಿಕ್ಕಿತು. ಅನೇಕ ಮುಖಂಡರು ನಮ್ಮನ್ನು ಭೇಟಿಯಾಗಿದ್ದಾರೆ. ಮಂಜುನಾಥ್ ಎಂದು ತಿಳಿಸಿದರು.