newsics.com
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. 26 ಜನರ ಪ್ರಾಣವನ್ನು ಬಲಿ ಪಡೆದ ಉಗ್ರರ ವಿರುದ್ಧ ಪ್ರತೀಕಾರ ತೀರಿಸುವ ಶುರುವಾಗಿದೆ.
ಈಗಾಗಲೇ ಪೊಲೀಸ್ ಇಲಾಖೆ ಪಹಲ್ಗಾಮ್ ದಾಳಿಕೋರರ ಮಾಹಿತಿಯನ್ನು ರಿಲೀಸ್ ಮಾಡಿದ್ದು, ಉಗ್ರರ ಫೋಟೋ ಕೂಡಾ ಬಹಿರಂಗಪಡಿಸಿದ್ದಾರೆ. ಇದೀಗ ಭಯೋತ್ಪಾದಕರ ಬಗ್ಗೆ ನಿಖರ ಮಾಹಿತಿ ನೀಡಿದ್ರೆ 20 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಮಹತ್ವದ ಘೋಷಣೆ ಮಾಡಿದೆ.