newsics.com
ರಾಯಚೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ, ದೇವಾಲಯದಲ್ಲಿ, ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಮಾಸ್ವಾ ಮಠಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಆಗಮಿಸುತ್ತಿರುತ್ತಾರೆ. ಹೀಗಾಗಿ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಬಾಂಬ್ ಸ್ಕ್ವಾಡ್, ಶ್ವಾನದಳ, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಂತ್ರಾಲಯದಲ್ಲಿ ತೀವ್ರವಾಗಿ ತಪಾಸಣೆ ನಡೆಸಿದ್ದು, ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರಿ ಮಳಿಗೆಗಳು, ವಸತಿಗೃಹ, ಮಂತ್ರಾಲಯಕ್ಕೆ ಬರುವ ಬಸ್, ವಾಹನಗಳು, ಭಕ್ತರ ಬ್ಯಾಗ್ ಗಳನ್ನು ತಪಾಸಣೆ ನಡೆಸಲಾಯಿತು. ಮಂತ್ರಾಲಯಂ ಹಾಗೂ ಮಾಧವರಂ ಠಾಣೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ