newsics.com
ಉತ್ತರ ಪ್ರದೇಶ: ಮಣ್ಣಿನ ದಿಬ್ಬ ಕುಸಿದು ಇಬ್ಬರು ಬಾಲಕಿಯರು ಸೇರಿ ಐವರು ಉಸಿರುಗಟ್ಟಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದಿದೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮಮತಾ (35), ಲಲಿತಾ (35), ಖುಷಿ (15), ಉಮಾದೇವಿ (13) ಮತ್ತು ಕಚರಾಹಿ (70) ಮೃತರು. ಮೈನಾದೇವಿ, ಸಪ್ನಾ ಮತ್ತು ಆಕ್ರೋಶ್ ಕುಮಾರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಮತ್ತು ಗಾಯಗೊಂಡವರಿಗೆ ರೈತ ವಿಮಾ ಯೋಜನೆಯಡಿ ಪರಿಹಾರ ನೀಡಲಾಗುವುದು” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದರು.
ಸಿಎಂ ಯೋಗಿ ಆದಿತ್ಯನಾಥ್ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.
Free Education Offer: ಪಹಲ್ಗಾಮ್ ಸಂತ್ರಸ್ತ ಮಕ್ಕಳಿಗೆ ಕರ್ನಾಟಕದಲ್ಲಿ ಉಚಿತ ಶಿಕ್ಷಣ!