Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Congress deletes controversial ‘missing’ post. ಬಿಜೆಪಿಯ‌ ಕಟು ವಾಗ್ದಾಳಿ ಬಳಿಕ ವಿವಾದಾತ್ಮಕ ‘ಗಾಯಬ್’ ಪೋಸ್ಟ್ ಅಳಿಸಿದ ಕಾಂಗ್ರೆಸ್
ದೇಶಪ್ರಮುಖವಿದೇಶವೈರಲ್

Congress deletes controversial ‘missing’ post. ಬಿಜೆಪಿಯ‌ ಕಟು ವಾಗ್ದಾಳಿ ಬಳಿಕ ವಿವಾದಾತ್ಮಕ ‘ಗಾಯಬ್’ ಪೋಸ್ಟ್ ಅಳಿಸಿದ ಕಾಂಗ್ರೆಸ್

Share
2 Min Read
SHARE

newsics.com

ನವದೆಹಲಿ: ಬಿಜೆಪಿಯ ಕಟು ದಾಳಿಯ ನಂತರ ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಎಕ್ಸ್‌ನಲ್ಲಿ ಹಾಕಿದ್ದ ವಿವಾದಾತ್ಮಕ ‘ಗಾಯಬ್’ ಪೋಸ್ಟ್‌ನ್ನು ಕಾಂಗ್ರೆಸ್ ಪಕ್ಷವು ಡಿಲೀಟ್ ಮಾಡಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಪಾಕಿಸ್ತಾನದ ಬೆಂಬಲಿಗ ಎಂದು ಕರೆದ ಭಾರೀ ವಿವಾದದ ನಂತರ ಕಾಂಗ್ರೆಸ್ ಮಂಗಳವಾರ ಎಕ್ಸ್ ನಲ್ಲಿನ ವಿವಾದಾತ್ಮಕ ಪೋಸ್ಟ್ ಅಳಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ‘ಗಾಯಬ್’ ಪೋಸ್ಟರ್‌ನೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಣಕಿಸುವ ವಿವಾದಾತ್ಮಕ ಎಕ್ಸ್‌ನಲ್ಲಿನ ಪೋಸ್ಟ್‌ನ್ನು ಕಾಂಗ್ರೆಸ್ ಅಳಿಸಿ ಹಾಕಿದೆ.

ಕಾಂಗ್ರೆಸ್ ತನ್ನ ‘ಎಕ್ಸ್‌’ ಖಾತೆಯಲ್ಲಿ, ಪ್ರಧಾನಿ ಮೋದಿ ಅವರನ್ನೇ ಹೋಲುವಂತಹ, ಮುಖವಿಲ್ಲದ, ಕುರ್ತಾ, ಪೈಜಾಮಾ ತೊಟ್ಟಿರುವ ಹಾಗೂ ಕಪ್ಪು ಬಣ್ಣದ ಶೂ ಧರಿಸಿರುವ ಚಿತ್ರದಲ್ಲಿ ಗಾಯಬ್‌(ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟ್‌ ಹಂಚಿಕೊಂಡಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ಹೊಣೆಗಾರಿಕೆ ಸಮಯದಲ್ಲಿ ಮಾಯವಾಗುತ್ತಾರೆ ಎಂದು ವ್ಯಂಗ್ಯವಾಗಿ ಬಿಂಬಿಸುವ ಚಿತ್ರವನ್ನು ಕಾಂಗ್ರೆಸ್‌ ತನ್ನ ಜಾಲತಾಣ ಖಾತೆಯಲ್ಲಿ ಹಂಚಿಕೊಂಡದ್ದು ಕಾಂಗ್ರೆಸ್‌-ಬಿಜೆಪಿ ಮಧ್ಯೆ ಮಂಗಳವಾರ ವಾಕ್ಸಮರಕ್ಕೆ ಕಾರಣವಾಗಿತ್ತು.

ಕಾಂಗ್ರೆಸ್‌ನ ಈ ಪೋಸ್ಟ್‌ ಮುಸ್ಲಿಂ ಸಮುದಾಯವನ್ನು ಪ್ರಚೋದಿಸುವ ಗುರಿಯನ್ನು ಹೊಂದಿರುವ ‘ಸರ್ತನ್ ಸೆ ಜುದಾ’ (ಶಿರಚ್ಛೇದನ) ಚಿತ್ರಣವಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ನಾಯಕ ಅಮಿತ್ ಮಾಳವೀಯಾ, ಇದು ಕಾಂಗ್ರೆಸ್ ಮುಸ್ಲಿಂ ಮತ ಬ್ಯಾಂಕನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ರಾಜಕೀಯ ಹೇಳಿಕೆಯಾಗಿದ್ದು ಇದೊಂದು ನಾಯಿ ಶಿಳ್ಳೆ (dog whistle)ಗುರಿಯನ್ನು ಹೊಂದಿರುವ ಹೇಳಿಕೆಯಾಗಿದೆ ಎಂದಿದ್ದಾರೆ. (ಡಾಗ್ ವಿಶಿಲ್‌ ಎಂದರೆ ಮಾತಿನ ಮೂಲಕ ಪ್ರಚೋದಿಸದೆ ನಿರ್ದಿಷ್ಟ ಗುಂಪಿನ ಬೆಂಬಲವನ್ನು ಪಡೆಯಲು ರಾಜಕೀಯ ಸಂದೇಶ ಕಳುಹಿಸುವಾಗ ಬಳಸುವ ಸಾಂಕೇತಿಕ ಭಾಷೆಯಾಗಿದೆ.)

ಕಾಂಗ್ರೆಸ್ ಈ ಸರ್ ತನ್ ಸೇ ಜುದಾ ಎಂಬುದನ್ನು ಸಂಕೇತಿಸುವ ಈ ಫೋಟೋವನ್ನು ಬಳಸುವಾಗ ಸಣ್ಣ ಅನುಮಾನವನ್ನು ಬಿಡಲಿಲ್ಲ. ಇದು ಕೇವಲ ರಾಜಕೀಯ ಹೇಳಿಕೆಯಲ್ಲ, ತನ್ನ ಮುಸ್ಲಿಂ ಮತ ಬ್ಯಾಂಕ್‌ನ್ನು ಗುರಿಯಾಗಿಸಿಕೊಂಡು ಪ್ರಧಾನಿಯವರ ವಿರುದ್ಧ ನೀಡಿದ ಸಾಂಕೇತಿಕ ಪ್ರಚೋದನಕಾರಿ ಪೋಸ್ಟ್ ಆಗಿದೆ. ಕಾಂಗ್ರೆಸ್‌ ಇಂತಹ ತಂತ್ರಗಳನ್ನು ಬಳಸುತ್ತಿರುವುದು ಇದೇ ಮೊದಲಲ್ಲ ಎಂದು ಬಿಜೆಪಿ ಟೀಕಿಸಿದೆ. ಅಲ್ಲದೆ,‌ ಕಾಂಗ್ರೆಸ್ ಪಾಕ್ ಬೆಂಬಲಿಸುವ ಪಕ್ಷ ಎಂದು ಜರಿದಿದೆ.

Modi Meeting ಟೈಮ್, ಪ್ಲೇಸ್ ಎಲ್ಲವನ್ನೂ ನೀವೇ ನಿರ್ಧರಿಸಿ – ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಪ್ರಧಾನಿ ಮೋದಿ

Pahalgam Attack Video: ಪಹಲ್ಗಾಮ್ ಉಗ್ರರ ದಾಳಿಯ ಮತ್ತೊಂದು ವಿಡಿಯೋ- ಪ್ರವಾಸಿಗನ ಸೆಲ್ಫಿ ವಿಡಿಯೋದಲ್ಲಿ ಸೆರೆಯಾದ ಉಗ್ರರ ಕೃತ್ಯ

ಎಟಿಎಂ ಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕುಗಳಿಗೆ ಆರ್‌ಬಿಐ ಸೂಚನೆ

TAGGED:#Congress #deletes #controversial #missing #xpost #BJP #attack #modi #pahalgam #gaayab #newsics #news #pakisthan #india
Share This Article
Facebook Twitter Copy Link Print
Previous Article Astrology ವಾರದ ಈ ದಿನಗಳಲ್ಲಿ ಉಗುರು ಕತ್ತರಿಸಲೇಬೇಡಿ: ಉಗುರು ಕತ್ತರಿಸಲೂ ಇದೆ ಸ್ಪೆಷಲ್ ಡೇ
Next Article State Digital Media Conference ಬೆಂಗಳೂರಲ್ಲಿ ಶೀಘ್ರದಲ್ಲೇ ರಾಜ್ಯ ಡಿಜಿಟಲ್ ಮಾಧ್ಯಮ ಸಮ್ಮೇಳನ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?