newsics.com
ನವದೆಹಲಿ: ಕೇಂದ್ರ ಸರ್ಕಾರ 11 ವರ್ಷಗಳ ನಂತರ ಜಾತಿ ಗಣತಿಗೆ ಮುಂದಾಗಿದ್ದು, ಸ್ವಾಗತಾರ್ಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜಾತಿಗಣತಿ ಮಾಡಿದ್ದೇವೆ. ಜಾತಿ ಗಣತಿ ಸರ್ವೆ ನಡೆಸಲು ಎಷ್ಟು ದಿನ ತೆಗೆದುಕೊಳ್ಳುತ್ತೀರಾ ಎಂಬುದನ್ನು ಸ್ಪಷ್ಟಪಡಿಸಬೇಕು. ಜಾತಿಗಣತಿಗೆ ಬಜೆಟ್ ನಲ್ಲಿ ಹಣ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ.ಯಾವ ತರಹದ ಸಮೀಕ್ಷೆ ಮಾಡುತ್ತೀರಾ ಎಂದು ಗೊತ್ತಾಗಬೇಕು. ಜಾತಿ ಜನಗಣತಿಯ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.