newsics.com
ದಾವಣಗೆರೆ: ಯುವತಿಯೊಬ್ಬಳು ಮೊಬೈಲ್ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹರಿಹರ ನಿಲ್ದಾಣದಲ್ಲಿ ನಡೆದಿದೆ.
ಮೃತಳನ್ನು ಬಳ್ಳಾರಿ ಮೂಲದ ಶ್ರಾವಣಿ (23) ಎಂದು ಗುರುತಿಸಲಾಗಿದೆ. ಶ್ರಾವಣಿ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದಳು. ಹರಿಹರಕ್ಕೆ ಶುಭ ಕಾರ್ಯಕ್ಕೆ ಸಂಬಂಧಿಕರ ಮನೆಗೆ ಬಂದಿದ್ದಳು. ರಾತ್ರಿ ಮೈಸೂರಿಗೆ ಹೋಗಲು ರೈಲು ನಿಲ್ದಾಣಕ್ಕೆ ಬಂದು, ಹಳಿ ದಾಟುತ್ತಿರುವಾಗ ಯುವತಿ ರೈಲು ಬರುವುದನ್ನು ಗಮನಿಸದೇ ರೈಲ್ವೇ ಹಳಿ ದಾಟಲು ಯತ್ನಿಸಿದ್ದಾಳೆ. ರೈಲು ಆಕೆಗೆ ಡಿಕ್ಕಿಯಾಗಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ.