newsics.com
ನವದೆಹಲಿ: ನಾವು ಎಲ್ಲಾ ಭಯೋತ್ಪಾದಕರ ಮೇಲೆ ಸೇಡು ತೀರಿಸಿಕೊಳ್ಳುತ್ತೇವೆ. ಅವರು ಎಲ್ಲೇ ಅವಿತಿದ್ದರೂ ಹುಡುಕಿ ಹೊಡೆಯುತ್ತೇವೆ ಎಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪಹಲ್ಗಾಮ್ನಲ್ಲಿ ಅಮಯಾಕ ಪ್ರವಾಸಿಗರನ್ನು ಪಾಪಿ ಉಗ್ರರು ದಾಳಿ ಮಾಡಿ ಕೊಂದು ಬಿಟ್ಟಿದ್ದರು. ಆದ್ರೆ ಆ ನಂತರ ಉಗ್ರರ ವಿರುದ್ಧ ದೇಶದೆಲ್ಲೆಡೆ ಭಾರೀ ಆಕ್ರೋಶವೇ ಸೃಷ್ಟಿಯಾಗಿತ್ತು.
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ರಸ್ತೆಯನ್ನು ಲೋಕಾರ್ಪಣೆ ಮಾಡಿ ಪ್ರತಿಮೆಯನ್ನು ಅನಾವರಣಗೊಳಿಸಿದ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ, ಪಹಲ್ಗಾಮ್ ದಾಳಿಯಲ್ಲಿ ಬಲಿಯಾದ ಪ್ರತಿಯೊಬ್ಬರ ಸಾವಿಗೂ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಅಲ್ಲಿಯವರೆಗೂ ನಾವು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ ಎಂಬುದನ್ನು ಉಗ್ರರು ಮರೆಯಬಾರದು. ನಾವು ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುತ್ತೇವೆ. ನಾವು ಭಯೋತ್ಪಾದನೆಯನ್ನ ಬೇರುಸಹಿತ ಕಿತ್ತುಹಾಕುತ್ತೇವೆ ಎಂದು ಪಹಲ್ಗಾಮ್ ದಾಳಿಕೋರರಿಗೆ ಅಮಿತ್ ಶಾ ಕಠಿಣ ಎಚ್ಚರಿಕೆ ನೀಡಿದ್ದಾರೆ