newsics.com
ಕೋಲಾರ : ಲಾರಿ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊರವನಹಳ್ಳಿ ಬಳಿ ನಡೆದಿದೆ.
ಲಾರಿ ಚಾಲಕ ಹನುಮಂತ (55) ಕಾರ್ಮಿಕ ನಾಗರಾಜ್ ಸಾವನ್ನಪ್ಪಿದ್ದಾರೆ. ಟಿಪ್ಪರ್ ನಲ್ಲಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಹನುಮಂತ ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ನಿವಾಸಿ ಎಂದು ತಿಳಿದುಬಂದಿದೆ.