newsics.com
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ ನೋಟಿಸ್ ನೀಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿ ನ್ಯಾಯಾಲಯದ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ, ʼಆರೋಪಿಗಳನ್ನು ವಿಚಾರಣೆ ನಡೆಸುವ ಹಕ್ಕು ನ್ಯಾಯಯುತ ವಿಚಾರಣೆಗೆ ಜೀವ ತುಂಬುತ್ತದೆʼ ಎಂದು ಹೇಳಿದರು.
ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ನಿಗದಿಪಡಿಸಲಾಗಿದೆ.
ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2014ರ ಜೂನ್ 26ರಂದು ದಾಖಲಿಸಿದ ಖಾಸಗಿ ದೂರನ್ನು ಪಟಿಯಾಲ ಹೌಸ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟರು ಪರಿಗಣನೆಗೆ ತೆಗೆದುಕೊಂಡ ನಂತರ, ಜಾರಿ ನಿರ್ದೇಶನಾಲಯ (ಇ.ಡಿ) 2021ರಲ್ಲಿ ತನಿಖೆಯನ್ನು ಪ್ರಾರಂಭಿಸಿತು.