newsics.com
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಂತಕರ ಎಡೆಮುರಿಯನ್ನು ಪೊಲೀಸರು ಕಟ್ಟಿದ್ದಾರೆ. 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಹಿಂದಿನ ಇಂಚಿಂಚೂ ರಹಸ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಸುಹಾಸ್ ಶೆಟ್ಟಿ ಮೇಲೆ ತಲ್ವಾರ್ ದಾಳಿಯ ವಿಡಿಯೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಹತ್ಯೆ ವೇಳೆ ಹಂತಕರಿಗೆ ಕಾರು ಹತ್ತಿಸಿ ಸಹಾಯ ಮಾಡಿದ ಆ ಬುರ್ಖಾಧಾರಿ ಮಹಿಳೆಯರು ಯಾರು ಎಂದು ಗುರುತಿಸಿದ್ದೇವೆ. ಆರೋಪಿಗಳಲ್ಲಿ ಒಬ್ಬನಾದ ನಿಯಾಜ್ ಎಂಬಾತನ ಸಂಬಂಧಿಕರು ಎಂದು ಹೇಳಿದ್ದಾರೆ. ಯಾವುದೋ ಕೆಲಸಕ್ಕೆ ಅವರು ಬಂದವರು‘ ಎಂದು ಹೇಳಿದ್ದಾರೆ.
ಹತ್ಯೆಯ ಪ್ರಮುಖ ಆರೋಪಿ ಸಫ್ವಾನ್ ಮೇಲೆ 2023ರಲ್ಲಿ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಪ್ರಶಾಂತ್ ಹಾಗೂ ಧನರಾಜ್ ಹಲ್ಲೆ ಮಾಡಿದ್ದರು. ಈ ಇಬ್ಬರು ಸುಹಾಸ್ ಶೆಟ್ಟಿ ಸ್ನೇಹಿತರು, ಇದೇ ಕಾರಣಕ್ಕೆ ಆತನಿಗೆ ಕೊಲೆ ಆತಂಕ ಇತ್ತು. ಈ ಹಿನ್ನೆಲೆಯಲ್ಲಿ ಸುಹಾಸ್ನನ್ನು ಕೊಲೆ ಮಾಡಲು ತೀರ್ಮಾನ ಮಾಡಿದ್ದ. ಇದೇ ವೇಳೆ ಹತ್ಯೆಯಾಗಿದ್ದ ಫಾಝೀಲ್ ತಮ್ಮನನ್ನು ಸಂಪರ್ಕಿಸಿ ಸುಹಾಸ್ ಕೊಲೆ ಮಾಡೋಕೆ ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ.