newsics.com
ಬೆಂಗಳೂರು : ಇನ್ಮುಂದೆ ಸೋನುನಿಗಮ್ ನಿಂದ ಕನ್ನಡ ಹಾಡು ಹಾಡಿಸಲ್ಲ, ಯಾವುದೇ ಕಾರ್ಯಕ್ರಮ ನಡೆಸಲ್ಲ ಎಂದು ಫಿಲಂ ಚೇಂಬರ್ ನಿರ್ಧರಿಸಿದೆ.ಈ ಮೂಲಕ ಖ್ಯಾತ ಗಾಯಕ ಸೋನು ನಿಗಮ್ ಗೆ ಬ್ಯಾನ್ ಬಿಸಿ ತಟ್ಟಿದೆ.
ಈ ಬಗ್ಗೆ ಮಾತನಾಡಿದ ಫಿಲಂಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಸೋನು ನಿಗಮ್ ಗೆ ಇನ್ನೂ ತಪ್ಪಿನ ಬಗ್ಗೆ ಅರಿವಾಗಿಲ್ಲ, ಕ್ಷಮೆಯಾಚಿಸಿಲ್ಲ ಹೀಗಾಗಿ ಇನ್ಮುಂದೆ ಸೋನುನಿಗಮ್ ನಿಂದ ಕನ್ನಡ ಹಾಡು ಹಾಡಿಸಲ್ಲ, ಯಾವುದೇ ಕಾರ್ಯಕ್ರಮ ನಡೆಸುವುದಿಲ್ಲ. ಬೆಂಗಳೂರಿನ ಫಿಲಂಚೇಂಬರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
, ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಗಾಯಕ ಸೋನು ನಿಗಮ್ ಗೆ ಬೆಂಗಳೂರು ಪೊಲೀಸರು ನೋಟಿಸ್ ನೀಡಿದ್ದಾರೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಗಾಯಕ ಸೋನು ನಿಗಮ್ ಗೆ ನೋಟಿಸ್ ನೀಡಿದ್ದಾರೆ. . ಇಮೇಲ್, ರಿಜಿಸ್ಟರ್ ಪೋಸ್ಟ್ ಮೂಲಕ ಬೆಂಗಳೂರಿನ ಆವಲಹಳ್ಳಿ ಪೊಲೀಸರು ನೋಟಿಸ್ ರವಾನೆ ಮಾಡಿದ್ದಾರೆ. ಸೋನು ನಿಗಮ್ ನನ್ನು ಬಂಧಿಸುವಂತೆ ಕನ್ನಡ ಪರ ಸಂಘನೆಗಳು ಪಟ್ಟು ಹಿಡಿದಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿವಾದಾತ್ಮಕ ಹೇಳಿಕೆಗಾಗಿ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. .ಕರ್ನಾಟಕ ರಕ್ಷಣಾ ವೇದಿಕೆ ನೀಡಿದ ದೂರಿನ ಮೇರೆಗೆ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.