newsics.com
ಕಲಬುರಗಿ: ನಿನ್ನೆ ಕಲಬುರಗಿಯಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
ಪರೀಕ್ಷಾ ಸಿಬ್ಬಂದಿ ವಿದ್ಯಾರ್ಥಿ ಶ್ರೀಪಾದ್ ಅವರ ಜನಿವಾರ ತೆಗೆಸಿದ್ರು. ಇದಕ್ಕೆ ಬ್ರಾಹ್ಮಣ ಸಮಾಜದ ಪರೀಕ್ಷಾ ಕೇಂದ್ರದ ಮುಂದೆಯೇ ಪ್ರತಿಭಟನೆ ಮಾಡಿತ್ತು. ಈ ಪ್ರತಿಭಟನೆಗೆ ಸರ್ಕಾರ ಮಣಿಯಿದ್ದು, ಜನಿವಾರ ತೆಗೆಸಿದ್ದು ತಪ್ಪು ಎಂದಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಇಬ್ಬರು ಪರೀಕ್ಷಾ ಸಿಬ್ಬಂದಿ ಶರಣಗೌಡ ಮತ್ತು ಗಣೇಶ್ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿ ನೀಟ್ ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವಾಗ ಅಧಿಕಾರಿಗಳು ಜನಿವಾರ ತೆಗೆದು ಬರಲು ಸೂಚಿಸಿದರು. ವಿದ್ಯಾರ್ಥಿ ಈ ಸೂಚನೆ ಅನುಸರಿಸಿ ಜನಿವಾರ ತೆಗೆದು ಪರೀಕ್ಷೆಗೆ ಹಾಜರಾದರು. ಈ ಘಟನೆಗೆ ವಿರೋಧವಾಗಿ ಬ್ರಾಹ್ಮಣ ಸಮಾಜದ ಸದಸ್ಯರು ಪರೀಕ್ಷಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದರು.