newsics.com
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರಮುಖ ಜೈಲುಗಳ ಮೇಲೆ ಭಯೋತ್ಪಾದಕ ದಾಳಿಯ ಸಾಧ್ಯತೆ ಇದೆ ಎಂಬ ಗುಪ್ತಚರ ಮಾಹಿತಿ ನೀಡಿದೆ. ಈ ಹಿನ್ನೆಲೆ ಶ್ರೀನಗರ ಕೇಂದ್ರ ಜೈಲು ಮತ್ತು ಜಮ್ಮುವಿನ ಕೋಟ್ ಬಲ್ವಾಲ್ ಜೈಲುಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ
ಈ ಜೈಲುಗಳಲ್ಲಿ ಪ್ರಸ್ತುತ ಭಯೋತ್ಪಾದಕರು ಹಾಗೂ ಭೂಗತ ಲೋಕದ ಕೊಲೆ ಪಾತಕಿಗಳಿದ್ದಾರೆ. ಅವರು ದಾಳಿಗಳಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಸಹ, ಲಾಜಿಸ್ಟಿಕಲ್ ಸಹಾಯ, ಆಶ್ರಯ ಮತ್ತು ಅವರ ಓಡಾಟ ಸುಗಮಗೊಳಿಸುವ ಮೂಲಕ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಾರೆ.
ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಉಗ್ರ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಟಿಆರ್ಎಫ್ ಹೊಣೆ ಹೊತ್ತಿತ್ತು.
ಗುಪ್ತಚರ ಮಾಹಿತಿಯ ನಂತರ, ಜೈಲುಗಳ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಗಳನ್ನು ಬಲಪಡಿಸಲಾಗಿದೆ.