newsics.com
ನವದೆಹಲಿ: ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸಾರನ್ ವ್ಯಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಖಂಡಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ “ಅತ್ಯಧಿಕ”ವಾಗಿದೆ ಎಂದು ಸಂಯುಕ್ತ ರಾಷ್ಟ್ರಗಳ ಮಹಾಸಚಿವ ಅಂತರಿಯೋ ಗುಟೆರೆಸ್ ಅವರು ಗಮನಸೆಳೆದರು. “ಭಾರತ–ಪಾಕಿಸ್ತಾನ ಸಂಬಂಧಗಳು ಕುದಿಯುವ ಹಂತವನ್ನು ತಲುಪುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ” ಎಂದು ಅವರು ಹೇಳಿದರು.
ಪಾಕಿಸ್ತಾನದಲ್ಲಿ ತರಬೇತಿ ಪಡೆದು ಅಲ್ಲಿ ನೆಲೆಸಿದ್ದ ಭಯೋತ್ಪಾದಕರು ದಾಳಿ ನಡೆಸಿ 26 ನಾಗರಿಕರನ್ನು ಕೊಂದರು ಹಾಗೂ ಅನೇಕರನ್ನು ಗಾಯಗೊಳಿಸಿದರು. ಅವರಲ್ಲಿ ಹೆಚ್ಚಿನವರು ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ ಬೈಸರನ್ಗೆ ರಜೆಗೆ ತೆರಳಿದ್ದ ಪ್ರವಾಸಿಗರು ಆಗಿದ್ದರು. ಹಾಗಾಗಿ, ದಾಳಿಗೆ ಕಾರಣರಾದವರನ್ನು ಕಾನೂನುಬದ್ಧ ವಿಧಾನಗಳ ಮೂಲಕ ಶಿಕ್ಷೆಗೂಳಪಡಿಸಬೇಕೆಂದು ಅವರು ಒತ್ತಿಹೇಳಿದರು.