newsics.com
ನವದೆಹಲಿ: ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ ಉಗ್ರ ಮಸೂದ್ ಅಝರ್ ಕುಟುಂಬದ 14 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಮಸೂದ್ ಅಝರ್ ಸಹೋದರ, ಸಹೋದರಿಯರು ಸೇರಿ 14 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಂಧೂರ ಕಾರ್ಯಾಚರಣೆಯಲ್ಲಿ ಈವರೆಗೆ 80 ಉಗ್ರರನ್ನು ಹತ್ಯೆಗೈಯಲಾಗಿದೆ.
ಈ ಬಗ್ಗೆ ಉಗ್ರ ಮಸೂದ್ ಕಣ್ಣೀರಿಟ್ಟಿದ್ದಾನೆ. ನನ್ನ ಹತ್ತು ಸಹೋದರಿಯರನ್ನು ಕೊಲ್ಲಲಾಗಿದೆ. ನಾನೂ ಸತ್ತಿದ್ದರೆ ಚೆನ್ನಾಗಿರ್ತಿತ್ತು ಎಂದು ಕಣ್ಣೀರು ಹಾಕಿದ್ದಾನೆ. ಜತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾನೆ.