newsics.com
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ವೈಮಾನಿಕ ದಾಳಿಯ ಮೂಲಕ 70ಕ್ಕೂ ಹೆಚ್ಚು ಭಯೋತ್ಪಾದಕರನ್ನು ಸಂಹಾರ ಮಾಡಿದೆ. ಭಾರತೀಯ ಸೇನೆ ಮತ್ತು ವಾಯುಪಡೆ ಒಟ್ಟಾಗಿ ಪಾಕ್ನಲ್ಲಿರೋ ಭಯೋತ್ಪಾದಕ ನೆಲೆಗಳನ್ನು ದ್ವಂಸಗೊಳಿಸಿದೆ.
ಆಪರೇಷನ್ ಸಿಂಧೂರ್’ ಮಿಲಿಟರಿ ಕಾರ್ಯಚರಣೆಗೆ ಸಂಬಂಧಿಸಿದಂತೆ ಭಾರತ ಸರ್ಕಾರ ಸುದ್ದಿಗೋಷ್ಟಿ ನಡೆಸಿ ಸಂಪೂರ್ಣ ಮಾಹಿತಿ ನೀಡಿದೆ. ವಿಶೇಷ ಅಂದರೆ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಸೇನಾಧಿಕಾರಿಗಳ ನೇತೃತ್ವದಲ್ಲಿ ಸುದ್ದಿಗೊಷ್ಟಿ ನಡೆಸಲಾಗಿದೆ. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕರ್ನಲ್ ಸೋಫಿಯಾ ಖುರೇಷಿ ಸುದ್ದಿಗೋಷ್ಟಿಯ ನೇತೃತ್ವ ವಹಿಸಿದ್ದರು. ಜೊತೆಗೆ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿಕ್ರಂ ಮೆಸ್ತ್ರಿ ಕೂಡ ಭಾಗಿಯಾಗಿದ್ದರು.
ಇನ್ನು, ಭಾರತ ಟಾರ್ಗೆಟ್ ಮಾಡಿ ನಡೆಸಿದ ದಾಳಿಯ ವಿಡಿಯೋವನ್ನು ಸೇನೆ ಬಿಡುಗಡೆ ಮಾಡಿದೆ. 9 ಭಯೋತ್ಪಾದಕರ ನೆಲೆಯಲ್ಲಿ ನಡೆದ ದಾಳಿಗೆ ಸಂಬಂಧಿಸಿ ವಿಡಿಯೋಗಳು ಅವಾಗಿವೆ. ಅಲ್ಲದೇ ಪಾಕ್ ಮಿಲಿಟರಿ ಕ್ಯಾಂಪ್ ಮೇಲೆ ದಾಳಿ ಆಗಿಲ್ಲ ಎಂದು ತಿಳಿಸಿದೆ.