newsics.com
ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ಭಾರತದ ಮಾಸ್ಟರ್ ಸ್ಟ್ರೋಕ್ಗೆ 70 ಉಗ್ರರು ಬಲಿಯಾಗಿದ್ದಾರೆ.
ಕಳೆದ ಐದು ದಶಕಗಳಲ್ಲಿ ಪಾಕಿಸ್ತಾನ ಪ್ರದೇಶಗಳಲ್ಲಿ ಭಾರತ ನಡೆಸಿದ ಅತೀ ದೊಡ್ಡ ದಾಳಿ ಇದಾಗಿದೆ.
ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಈ ದಾಳಿ ಆಗಿದೆ. ಮುರೀದ್ಕೆ, ಮುಜಾಫರ್ಬಾದ್, ಬಹಾವಲ್ಪುರ್, ಕೋಟ್ಲಿ, ಚಾಕ್ಅಮ್ರು, ಗುಲ್ಪುರ್, ಭಿಂಬರ್ನಲ್ಲಿ ದಾಳಿ ಆಗಿದೆ. ಇನ್ನೂ, ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕೇವಲ 23 ನಿಮಿಷದಲ್ಲಿ ಪಾಕ್ನ 9 ನೆಲೆಯನ್ನು ಉಡೀಸ್ ಮಾಡಿದೆ.
ಇದರ ನಡುವೆಯೇ ಪಾಕಿಸ್ತಾನ ಮತ್ತೆ ತನ್ನ ಕುತಂತ್ರಿ ಬುದ್ಧಿಯನ್ನು ಮುಂದುವರಿಸಿದ್ದು, ಜಮ್ಮು ಕಾಶ್ಮೀರದ ಎಲ್ಒಸಿ ಹಾಗೂ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅಪ್ರಚೋದಿತ ದಾಲಿ ನಡೆಸಿದ್ದು, ಈ ದಾಳಿಯಲ್ಲಿ ಭಾರತದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನೆ ಮಾಹಿತಿ ಹಂಚಿಕೊಂಡಿದೆ.
ನಾಗರೀಕ ಪ್ರದೇಶಗಳನ್ನು ಗರಿಯಾಗಿಸಿಕೊಂಡು ನಡೆದ ಶೆಲ್ಲಿಂಗ್ ನಲ್ಲಿ ಭಾರತದ ಮೂವರು ಪ್ರಜೆಗಳು ಸಾವನ್ನಪ್ಪಿದ್ದಾರೆ. ಭಾರತದ ನಡೆಸಿದ ನಿಖರ ದಾಳಿ ಕೆಲ ಗಂಟೆಗಳಲ್ಲೇ ಪಾಕಿಸ್ತನ ಕದನ ವಿರಾಮ ಉಲ್ಲಂಘನೆ ಮಾಡಿದೆ.