newsics.com
ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿದೆ. ಮಾಕ್ ಡ್ರಿಲ್ ಎಂದು ಒಂದು ದಿನ ಮೊದಲು ಇಡೀ ಸುದ್ದಿ ಮಾಡಿದ್ದ ಭಾರತ ಪಾಕಿಸ್ತಾನ ಊಹಿಸಿಯೂ ನೋಡಿಕೊಳ್ಳಲಾಗದ ಸ್ಥಿತಿಯಲ್ಲಿ ಉತ್ತರ ಕೊಟ್ಟಿದೆ.
ಇದರ ಬೆನ್ನಲ್ಲೇ ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರೋ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸೇನಾ ದಾಳಿಯ ಕುರಿತು ಚರ್ಚಿಸಲು ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ಕರೆಯಲಾದ ಸರ್ವಪಕ್ಷ ಸಭೆಯಲ್ಲಿ ಮಾಹಿತಿ ನೀಡಿದ ರಕ್ಷಣಾ ಸಚಿವರು, ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಜನರು ಜಾಗರೂಕರಾಗಿರಬೇಕು. ಈ ಕಾರ್ಯಾಚರಣೆ ನಿಲ್ಲಲ್ಲ ಎಂದು ಹೇಳಿದರು.
ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಯಲ್ಲಿರುವ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಧ್ವಂಸ ಮಾಡಲಾಗಿದ್ದು, 100 ಭಯೋತ್ಪಾದಕರು ಹತರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.