newsics.com
ಬೆಂಗಳೂರು: ಆಪರೇಷನ್ ಸಿಂಧೂರ ಪ್ರತೀಕಾರದ ನಂತ್ರ ದೇಶಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಲೂ ಪೊಲೀಸರು ಹೆಚ್ಚಿನ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.
ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಪ್ರತೀ ಗೇಟ್ ಬಳಿಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೂರು ಪಾಳಿಗಳಲ್ಲಿ 70ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 13ರಂದು ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪಂದ್ಯ ನಡೆಯಲಿದೆ.
ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು