newsics.com
ಭಾರತ ಪಾಕ್ ಮಧ್ಯೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಪಾಕ್ ಭಯೋತ್ಪಾದಕರ ಪಹಲ್ಗಾಮ್ ದಾಳಿಗೆ ಭಾರತ ಪ್ರತ್ಯುತ್ತರ ನೀಡ್ತಿದೆ. ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ತಾನದ ಹುಟ್ಟಡಗಿಸುತ್ತಿದೆ. ಭಾರತದ ಪ್ರತೀಕಾರದ ಕ್ರಮದಿಂದಾಗಿ ಪಾಕಿಸ್ತಾನದಲ್ಲಿ ಭೀತಿ ಉಂಟಾಗಿದೆ. ಅದರ ಹಲವು ನಗರಗಳಲ್ಲಿ ಅವ್ಯವಸ್ಥೆಯ ವಾತಾವರಣವಿದೆ. ಸೇನಾ ಶಿಬಿರಗಳಿಂದ ಜನರನ್ನು ಸ್ಥಳಾಂತರಿಸುವ ಕೆಲಸವೂ ನಡೆಯುತ್ತಿದೆ. ವಾಸ್ತವವಾಗಿ, ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದ ನಂತರ, ಭಾರತವು ಲಾಹೋರ್, ಇಸ್ಲಾಮಾಬಾದ್, ಕರಾಚಿ, ಸಿಯಾಲ್ಕೋಟ್, ಬಹವಾಲ್ಪುರ್ ಮತ್ತು ಪೇಶಾವರ್ ಸೇರಿದಂತೆ ಪಾಕಿಸ್ತಾನದ ಹಲವು ನಗರಗಳ ಮೇಲೆ ಪ್ರತೀಕಾರ ತೀರಿಸಿಕೊಂಡಿದೆ. ಸ್ಥಳೀಯ ಆಕಾಶ್ ರಕ್ಷಣಾ ಕ್ಷಿಪಣಿ ಪಾಕಿಸ್ತಾನದ ದಾಳಿಗಳನ್ನು ವಿಫಲಗೊಳಿಸಿತು.
ಇದೀಗ ಪಾಕಿಸ್ತಾನ ಸೇನೆಗೆ ಅಗತ್ಯ ಬಿದ್ದರೆ ಮದರಸಾ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದಿದ್ದಾರೆ. ಅವರು ಈ ದೇಶಕ್ಕಾಗಿ ಸಮರ್ಪಿತರಾಗಿದ್ದಾರೆ. ಮದರಸಾ ವಿದ್ಯಾರ್ಥಿಗಳು ಶೇಕಡಾ 100 ರಷ್ಟು ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಅವರು ದೇಶದ ಸೆಕೆಂಡ್ ಲೈನ್ ಡಿಫೆನ್ಸ್ ಎಂದು ರಕ್ಷಣಾ ಸಚಿವ ಸಂಸತ್ತಿನಲ್ಲಿ ಹೇಳಿದ್ದಾರೆ. ಈ ಮೂಲಕ ಪಾಕಿಸ್ತಾನದ ಮದರಾಸಾ ಶಿಕ್ಷಣದ ಅಸಲಿಯತ್ತು ಬಯಲು ಮಾಡಿದ್ದಾರೆ.
ಪಾಕಿಸ್ತಾನದ ರಕ್ಷಣಾ ಸಚಿವ ಮದರಸಾ ವಿದ್ಯಾರ್ಥಿಗಳನ್ನು ನೇರವಾಗಿ ಪಾಕಿಸ್ತಾನ ಸೇನೆಯ ಸೆಕೆಂಡ್ ಲೈನ್ ಡಿಫೆನ್ಸ್ ಆಗಿ ಬಳಕೆ ಮಾಡಲಾಗುತ್ತದೆ ಎಂದು ಹೇಳಿದ್ದರೆ. ಅವರು ದೇಶಕ್ಕಾಗಿ ಸಮರ್ಪಿತರು ಎಂದಿದ್ದಾರೆ. ಈ ಹೇಳಿಕೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರಿ ಚರ್ಚೆ ಶುರುವಾಗಿದೆ. l