newsics.com
ಬೆಂಗಳೂರು: ಆಪರೇಷನ್ ಸಿಂಧೂರದ ಬಳಿಕ ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ರಾಜ್ಯ ಗುಪ್ತಚರ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆಡಳಿತ ಕಟ್ಟಡಗಳು, ರಕ್ಷಣಾ ಸ್ಥಾವರಗಳು, ಏರ್ಪೋರ್ಟ್ಗಳು, ವಿಜ್ಞಾನ ಸಂಶೋಧನಾ ಕೇಂದ್ರಗಳು, ಅಣೆಕಟ್ಟುಗಳು, ಉಪಗ್ರಹ ಕೇಂದ್ರ, ಜಲವಿದ್ಯುತ್ ಸ್ಥಾವರಗಳು, ಥರ್ಮಲ್ ಸ್ಥಾವರಗಳು, ಸಾಫ್ಟ್ವೇರ್ ಕಂಪನಿಗಳು, ಪೈಪ್ಲೈನ್ ಕೇಂದ್ರಗಳು, ಕೈಗಾರಿಕೆಗಳು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕೇಂದ್ರಗಳು, ಜನಸಂದಣಿ ಸೇರುವ ಶಾಪಿಂಗ್ ಮಾಲ್ಗಳು ಮತ್ತು ಹೋಟೆಲ್ಗಳು, ವಿದೇಶಿ ರಾಜತಾಂತ್ರಿಕ ಕಚೇರಿಗಳು, ವಸತಿ ಮತ್ತಿತರ ಕಟ್ಟಡಗಳು, ಜನ ಸಂದಣಿ ಸೇರುವ ದೇವಾಲಯಗಳು, ಮಸೀದಿ, ಚರ್ಚ್ಗಳು ಮತ್ತು ಜನಸಂದಣಿ ಸೇರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಆದೇಶ ಹೊರಡಿಸಿದೆ.
ಭಾಷಣ, ಘೋಷಣೆಗಳ ಮೂಲಕ ಶಾಂತಿ ಭಂಗವನ್ನುಂಟು ಮಾಡುವವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವವರು, ನಿಮ್ಮ ವ್ಯಾಪ್ತಿಯ ನಗರ ಅಥವಾ ಜಿಲ್ಲೆಗಳಿಗೆ ಭೇಟಿ ನೀಡುವ ಅಪರಿಚಿತರು, ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಮತ್ತು ಅವರು ತಂಗುವ ಸ್ಥಳ ಹಾಗೂ ಹೋಟೆಲ್ಗಳ ಮೇಲೆ ದೇಶದ ಭದ್ರತೆಯ ದೃಷ್ಟಿಯಿಂದ ನಿಗಾ ವಹಿಸಲು ಗುಪ್ತಚರ ಇಲಾಖೆ ಸೂಚನೆ ನೀಡಿದೆ