newsics.com
ನವದೆಹಲಿ: ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧ ಕೃತ್ಯವೆಂದು ಪರಿಗಣಿಸಲು ಭಾರತ ನಿರ್ಧರಿಸಿದೆ. ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಎಚ್ಚರಿಕೆ ನೀಡಿದೆ.
ಭಾರತದ ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನ ಅಪ್ರಚೋದಿತ ಆಕ್ರಮಣದಿಂದಾಗಿ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಿರುವಂತೆಯೇ, ದೇಶದಲ್ಲಿ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ.
ಮೇ 7 ರಿಂದ ಸತತ ಮೂರು ರಾತ್ರಿ ಇಸ್ಲಾಮಾಬಾದ್ ನಡೆಸಿದ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಮೇಲೆ ಭಾರೀ ಪ್ರತಿದಾಳಿ ನಡೆಸಿದ ನಂತರ, ಭಾರತದೊಂದಿಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ ಎಂದು ಮೂಲಗಳಿಂದ ತಿಳಿಸಿದ ನಂತರ ನರೇಂದ್ರ ಮೋದಿ ಸರ್ಕಾರದಿಂದ ಈ ಮಹತ್ವದ ಸಂದೇಶ ಹೊರಬಿದ್ದಿದೆ.
ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ಮಟ್ಟದ ಸಭೆಯ ಬಯಕೆಯನ್ನು ಪಾಕಿಸ್ತಾನ ವ್ಯಕ್ತಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
India- pak war ಭಾರತ- ಪಾಕ್ನಿಂದ ಪರಮಾಣು ಅಸ್ತ್ರ ಬಳಕೆ ಸಾಧ್ಯತೆ: ರೂಟ್ಲೆಡ್ಜ್ನಿಂದ ಬೆಚ್ಚಿಬೀಳಿಸುವ ವರದಿ