newsics.com
ನವದೆಹಲಿ: ಭಾರತ ನಡೆಸಿದ ‘ಆಪರೇಷನ್ ಸಿಂದೂರ’ದಿಂದ ತತ್ತರಿಸಿ ಪ್ರತಿದಾಳಿ ನಡೆಸುತ್ತಿರುವ ಪಾಕಿಸ್ತಾನ ಶುಕ್ರವಾರ ರಾತ್ರಿ ಕೂಡ ಜಮ್ಮು-ಕಾಶ್ಮೀರ, ರಾಜಸ್ಥಾನ, ಗುಜರಾತ್ ಹಾಗೂ ಪಂಜಾಬ್ನ ಸುಮಾರು 26ಕ್ಕೂ ಹೆಚ್ಚು ಸ್ಥಳಗಳು ದಾಳಿಗೀಡಾಗಿವೆ. ಈ ಭಾಗಗಳಲ್ಲಿ ಕತ್ತಲು ಆವರಿಸಿದ್ದು, ಸೈರನ್ ಹಾಗೂ ಸ್ಫೋಟದ ಶಬ್ದಗಳು ಮಾರ್ದನಿಸಿವೆ. ವಿಶೇಷವಾಗಿ ಶ್ರೀನಗರ ಏರ್ಪೋರ್ಟ್ ಹಾಗೂ ಕಾಶ್ಮೀರದ ಅವಂತಿಪೋರಾ ವಾಯುನೆಲೆ ಮೇಲೂ ದಾಳಿ ಯತ್ನ ನಡೆದಿದೆ.
ಬರಾಕ್-8, ಎಸ್-400 ಹಾಗೂ ಆಕಾಶ್ ವಾಯುರಕ್ಷಣಾ ವ್ಯವಸ್ಥೆ ಬಳಸಿ ಡ್ರೋನ್ಗಳನ್ನು ಬಹುತೇಕ ನಿಷ್ಕ್ರಿಯಗೊಳಿಸಲಾಗಿದೆ. 8 ಡ್ರೋನ್ಗಳನ್ನು ವಾಯುರಕ್ಷಣಾ ವ್ಯವಸ್ಥೆ ಬಳಸಿ ಆಗಸದಲ್ಲೇ ನಿಷ್ಕ್ರಿಯಗೊಳಿಸಲಾಗಿದೆ ಎಂದು ಮೂಲಗಳು ಹೇಳಿವೆ. ಡ್ರೋನ್ ದಾಳಿ ಬೆನ್ನಲ್ಲೇ ಜಮ್ಮು, ಶ್ರೀನಗರ ಮತ್ತು ರಾಜಸ್ಥಾನದ ಉತ್ತರ ಭಾಗದ ಶ್ರೀಗಂಗಾನಗರದ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿತು
ವಿಮಾನ ನಿಲ್ದಾಣಗಳು ಮತ್ತು ವಾಯುನೆಲೆಗಳು ಸೇರಿದಂತೆ ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿದ ಶತ್ರು ದೇಶದ ಡ್ರೋನ್ಗಳನ್ನು ಹೊಡೆದುರುಳಿಸಿದ್ದೇವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಅಗತ್ಯವಿರುವಲ್ಲೆಲ್ಲಾ ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿರುವವರಿಗೆ ಮನೆಯಲ್ಲೇ ಇರುವಂತೆ, ಅನಗತ್ಯ ಚಲನೆಯನ್ನು ಮಿತಿಗೊಳಿಸಲು ಮತ್ತು ಸ್ಥಳೀಯ ಅಧಿಕಾರಿಗಳು ಹೊರಡಿಸಿದ ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.