newsics.com
ಕೊಲಂಬೋ: ಕಂದಕಕ್ಕೆ ಬಸ್ ಉರುಳಿದ ಪರಿಣಾಮ 21 ಮಂದಿ ಸಾವನ್ನಪ್ಪಿ, ಕನಿಷ್ಠ 14 ಜನರು ಗಾಯಗೊಂಡ ಘಟನೆ ಶ್ರೀಲಂಕಾದ ಬೆಟ್ಟ ಪ್ರದೇಶದಲ್ಲಿ ನಡೆದಿದೆ.
ರಾಜಧಾನಿ ಕೊಲಂಬೊದಿಂದ ಪೂರ್ವಕ್ಕೆ ಸುಮಾರು 140 ಕಿಲೋಮೀಟರ್ (86 ಮೈಲುಗಳು) ದೂರದಲ್ಲಿರುವ ಕೋಟ್ಮಲೆ ಪಟ್ಟಣದ ಬಳಿ ಈ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಲಂಕಾದಲ್ಲಿ ಮಾರಣಾಂತಿಕ ಬಸ್ ಅಪಘಾತಗಳು ಸಾಮಾನ್ಯವಾಗಿವೆ. ಅಜಾಗರೂಕ ಚಾಲನೆ ಮತ್ತು ಕಳಪೆ ನಿರ್ವಹಣೆಯ ರಸ್ತೆಗಳಿಂದಾಗಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತವೆ.
Exam Date announced ಭಾರತ-ಪಾಕ್ ಉದ್ವಿಗ್ನತೆ ಮಧ್ಯೆ ರದ್ದಾಗಿದ್ದ ಪರೀಕ್ಷೆಗಳ ಹೊಸ ಡೇಟ್ ಅನೌನ್ಸ್