newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಹ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ ಎಂದು ಮೋದಿ, ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಗೆ ತಿಳಿಸಿದ್ದಾರೆ.
ಅಮೆರಿಕದ ಉಪಾಧ್ಯಕ್ಷರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಒಂದು ವೇಳೆ ಅಲ್ಲಿಂದ (ಪಾಕಿಸ್ತಾನ) ಗುಂಡು ಹಾರಿಸಿದ್ರೆ, ಇಲ್ಲಿಂದಲೂ (ಭಾರತ) ಗುಂಡು ಸಿಡಿಯುತ್ತೆ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆದುಕೊಳ್ಳುವುದೇ ಈಗ ಉಳಿದಿರುವ ಒಂದೇ ವಿಷಯ. ಈಗ ಮಾತನಾಡಲು ಬೇರೆ ಏನು ಉಳಿದಿಲ್ಲ. ಪಾಕಿಸ್ತಾನ ಭಯೋತ್ಪಾದಕರನ್ನು ಹಸ್ತಾಂತರಿಸುವ ಬಗ್ಗೆ ಮಾತನಾಡಿದ್ರೆ ನಾವು ಸಹ ಮಾತನಾಡಬಹುದು. ನಮಗೆ ಬೇರೆ ಯಾವುದೇ ವಿಷಯದ ಉದ್ದೇಶವಿಲ್ಲ. ನಾವು ಯಾರ ಮಧ್ಯಸ್ಥಿಕೆಯನ್ನು ಬಯಸಲ್ಲ ಮತ್ತು ಭಾರತಕ್ಕೆ ಅದರ ಅಗತ್ಯವು ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
ಉಗ್ರರನ್ನ ಪಾಕ್ ನಮಗೆ ಹಸ್ತಾಂತರ ಮಾಡಬೇಕು. ಅದರ ಬಗ್ಗೆ ಮಾತಾಡಲು ಸಿದ್ಧರಿದ್ದರೆ ಚರ್ಚೆಗೆ ರೆಡಿ. ಅದು ಬಿಟ್ಟರೆ ಮಾತನಾಡಲು ಬೇರೇನೂ ಉಳಿದಿಲ್ಲ. ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆ ಬೇಡ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಪ್ರಧಾನಿ ಮೋದಿ, ಫೋನ್ ಮೂಲಕ ಜೆ.ಡಿ.ವ್ಯಾನ್ಸ್ಗೆ ಸ್ಪಷ್ಟವಾಗಿ ಹೇಳಿದ್ದಾರೆ.