newsics.com
ಕಲಬುರಗಿ: ಭಾರತದ ಏರ್ಸ್ಟ್ರೈಕ್ ನೋಡಿ ಪಾಕಿಸ್ತಾನ ಪತರಗುಟ್ಟಿದೆ. ಭಾರತ ಎದುರು ಹಾಕಿಕೊಂಡರೆ ನಮಗೆ ಉಳಿಗಾಲವಿಲ್ಲ ಅನ್ನೋದನ್ನ ಅರಿತ ಪಾಕಿಸ್ತಾನ, ಕೊನೆಗೂ ಭಾರತದ ಮುಂದೆ ಮಂಡಿಯೂರಿದೆ. ಕದನ ವಿರಾಮ ಘೋಷಣೆ ಮಾಡಲಾಗಿದೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ದದ ಕಾರ್ಮೋಡ ಹಿನ್ನಲೆ ಇತ್ತ ರಜೆ ಮೇಲೆ ಬಂದಿದ್ದ ಕರ್ನಾಟಕದ ಯೋಧರನ್ನು ಕರೆಸುತ್ತಿದೆ.
ಹೆಂಡತಿ ಡೆಲಿವರಿಗಾಗಿ ರಜೆ ಮೇಲೆ ಬಂದಿದ್ದ ಕಲಬುರಗಿ ಮೂಲದ CRPF ಯೋಧ ಹಣಮಂತರಾಯ್ ಔಸೆ ಅವರು ವಾಪಸ್ ಸೇವೆಗೆ ತೆರಳುತ್ತಿದ್ದಾರೆ. ವಾರದ ಹಿಂದಷ್ಟೇ ಹಣಮಂತರಾಯ್ ಅವರ ಪತ್ನಿಗೆ ಗಂಡು ಮಗು ಜನನವಾಗಿದೆ. ರಜೆ ಅವಧಿಯಲ್ಲಿ ಕೇವಲ 15 ದಿನ ಕಳೆದಿದೆ. ಭಾರತೀಯ ಸೇನೆ ತುರ್ತು ಸೇವೆಗೆ ಆಗಮಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದೇಶ ಸೇವೆಗೆ ಯೋಧ ಮರಳಿದ್ದಾರೆ. ಈ ವೇಳೆ ಮಾತನಾಡಿದ ಯೋಧ ಣಮಂತರಾಯ್, ನನಗೆ ಮಗು, ಮನೆ, ಕುಟುಂಬಕ್ಕಿಂತ ದೇಶ ಮುಖ್ಯ. ನಾನು ಸೇನೆಗೆ ಸೇರುವ ಮುನ್ನ ನನಗೆ ಇದೇ ವೇದವಾಕ್ಯ. ಹಾಗಾಗಿ ದೇಶ ಸೇವೆಗಾಗಿ ತೆರಳುತ್ತಿದ್ದೇನೆ ಎಂದಿದ್ದಾರೆ.