newsics.com
ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ್ದ ಗಾಯಕ ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಸೋನು ನಿಗಂಗೆ ನೊಟೀಸ್ ಕಳಿಸಿ, ನೋಟೀಸ್ಗೆ ಉತ್ತರ ನೀಡುವಂತೆ ಸೂಚಿಸಿದ್ದರು. ಆದರೆ ಇದೀಗ ಗಾಯಕ ಸೋನು ನಿಗಂ, ತಮ್ಮ ವಿರುದ್ಧ ದಾಖಲಾಗಿರುವ ದೂರನ್ನು ರದ್ದು ಮಾಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದೂರುದಾರ ಹಾಗೂ ಆವಲಹಳ್ಳಿ ಪೊಲೀಸರಿಗೆ ನೋಟಿಸ್ ಹೊರಡಿಸಿದ ಕೋರ್ಟ್ ವಿಚಾರಣೆ ಮೇ 15 ಕ್ಕೆ ಮುಂದೂಡಿದೆ.ಏಪ್ರಿಲ್ 25 ರಂದು ಬೆಂಗಳೂರಿನ ಕಾಲೇಜು ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಅವರಿಗೆ ಕನ್ನಡ ಹಾಡುಗಳನ್ನು ಹಾಡುವಂತೆ ಒತ್ತಾಯಿಸಿದ್ದರು.ಅದಕ್ಕೆ ಸೋನು ನಿಗಮ್ ಸಿಟ್ಟಾಗಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ನಾಗರಿಕರು ಪ್ರಾಣ ಕಳೆದುಕೊಂಡ ಘಟನೆಯನ್ನು ಉಲ್ಲೇಖಿಸಿ ಕನ್ನಡ ಹಾಡುಗಳ ಹಾಡಿ ಎಂಬ ಬೇಡಿಕೆಯನ್ನು ಜೋಡಿಸುವ ಮೂಲಕ ಪ್ರತಿಕ್ರಿಯಿಸಿದ್ದರು.ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.
ಇತ್ತೀಚೆಗೆ ನಡೆದ ಸಂಗೀತಕಾರ್ಯಕ್ರಮದಲ್ಲಿ ನೀಡಿದ ತಮ್ಮ ಹೇಳಿಕೆ ಬಗ್ಗೆ ವಿವಾದಕ್ಕೆ ಕಾರಣವಾಗುತ್ತಲೇ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಕರ್ನಾಟಕದ ಜನರಿಗೆ ಸಾರ್ವಜನಿಕ ಕ್ಷಮೆಯಾಚಿಸಿದ್ದರು.