newsics.com
ಲಕ್ನೋ: ಬೆಳಗಿನ ಜಾವ ಚಲಿಸುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಐದು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಲಕ್ನೋ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ನಡೆದಿದೆ.
ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಹೆಚ್ಚಿನ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಬಸ್ನಲ್ಲಿ ಹೊಗೆ ತುಂಬಲು ಪ್ರಾರಂಭಿಸಿದ ನಂತರವೇ ಅವರು ಎಚ್ಚರಗೊಂಡರು. ಚಾಲಕ ಕಿಟಕಿ ಒಡೆದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ, ಇದರಿಂದಾಗಿ ಪ್ರಯಾಣಿಕರು ತಮ್ಮನ್ನು ತಾವು ರಕ್ಷಿಸಿಕೊಳ್ಳುವಂತಾಯಿತು.
ಬೆಂಕಿಯ ಸುದ್ದಿ ತಿಳಿದ ನಂತರ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.