newsics.com
ಬೆಂಗಳೂರು: ರಾಜ್ಯ ರಾಜಧಾನಿ ಸೇರಿ ರಾಜ್ಯದ ಹಲವೆಡೆ ಶನಿವಾರ ಭಾರೀ ಮಳೆ ಸುರಿದಿದ್ದು, ಬೆಂಗಳೂರಿನ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಮಳೆನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ. ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.
ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್.ಮಾರ್ಕೆಟ್, ಮೆಜೆಸ್ಟೆಕ್, ರಾಜಾಜಿನಗರ, ಲಾಲ್ಬಾಗ್, ಜಯನಗರ ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗಿದೆ.
ಭಾರೀ ಮಳೆಯಿಂದ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದೆ. ಹೆಬ್ಬಾಳದಲ್ಲಿ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳ ಕಡೆ ಹೋಗುವ ರಸ್ತೆಯಲ್ಲಿ ತೀವ್ರ ಸಂಚಾರದಟ್ಟಣೆ ಉಂಟಾಗಿತ್ತು. ವರ್ತೂರು ಕಡೆಯಿಂದ, ವೈಟಫಿಲ್ಡ್ ಕಡೆಗೆ ಹೋಗುವ ಮಾರ್ಗದಲ್ಲಿ, ಕಸ್ತೂರಿನಗರ ಕಡೆಯಿಂದ ಹೆಬ್ಬಾಳ ಮುಖ್ಯ ರಸ್ತೆಯ ಕಡೆಗೆ ಹೋಗುವ ಮಾರ್ಗದಲ್ಲಿ, ಬಾಗಲೂರು ಕಡೆಯಿಂದ ನಗರ ಮತ್ತು ವಿಮಾನ ನಿಲ್ದಾಣದ ಕಡೆಗೆ ಸಂಚರಿಸುವ ರಸ್ತೆಯಲ್ಲಿ ಮತ್ತು ನ್ಯಾಷನಲ್ ಗೇಮ್ಸ್ ವಿಲೇಜ್ ಗೆಟ್ನಿಂದ ಸೋನಿ ವರ್ಲ್ಡ್ ಜಂಕ್ಷನ್ ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ತಡ ರಾತ್ರಿವರೆಗೂ ಟ್ರಾಫಿಕ್ ಜಾಮ್ ಸಮಸ್ಯೆ ಮುಂದುವರಿದಿತ್ತು.
Rakshit shetty ರಕ್ಷಿತ್ ಶೆಟ್ಟಿಗೆ ಕಂಕಣ ಬಲ ಕೂಡಿಬರೋದ್ಯಾವಾಗ? ಪಂಜುರ್ಲಿ ದೈವ ಹೇಳಿದ್ದೇನು?
Government Hospital ಸರ್ಕಾರಿ ಆಸ್ಪತ್ರೆ ಹೊರಗಿನ ಜನ ಔಷಧಿ ಕೇಂದ್ರಗಳು ಮುಚ್ಚುತ್ತವೆಯೇ?
Color psychology: ನಿಮ್ಮ ಇಷ್ಟದ ಬಣ್ಣ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ….