newsics.com
ಬೆಂಗಳೂರು: ಅತಿಯಾದ ಕೆಲಸದ ಒತ್ತಡ ಮತ್ತು ಮ್ಯಾನೇಜರ್ ನೀಡುತ್ತಿದ್ದ ಕೆಲಸದ ಒತ್ತಡದಿಂದ ಒಲಾ ಸಂಸ್ಥೆಯ ಎಐ ಅಂಗವಾದ ಕೃತ್ರಿಮ್ನಲ್ಲಿ AI ಕಂಪನಿಯಲ್ಲಿ ಮೆಷಿನ್ ಲರ್ನಿಂಗ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ನಿಖಿಲ್ ಸೋಮವಂಶಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಟೆಕ್ಕಿಯ ಮೃತದೇಹ ಆಗರ ಕೆರೆಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಂಪನಿಯ ಕಠಿಣ ಕೆಲಸದ ವಾತಾವರಣ ಮತ್ತು ಕಿರುಕುಳ ನೀಡುತ್ತಿದ್ದ ಮ್ಯಾನೇಜರ್ ಎಂದು ಆರೋಪಿಸಲಾಗಿದೆ. ಉನ್ನತ ವ್ಯಾಸಂಗ ಮಾಡಿದ್ದ ನಿಖಿಲ್, ಕೆಲಸದ ಒತ್ತಡ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ರೆಡ್ಡಿಟ್ ಎನ್ನುವ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟವಾದ ಒಂದು ಪೋಸ್ಟ್ನಿಂದ ಈ ಘಟನೆ ಬೆಳಕಿಗೆ ಬಂದಿದೆ. ನಿಖಿಲ್ ಸೋಮವಂಶಿ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ ಎನ್ನಲಾಗಿದೆ.
ನಿಖಿಲ್ ಸೋಮವಂಶಿ IISc ನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ನಂತರ ಆಗಸ್ಟ್ 2024 ರಲ್ಲಿ ಕೆಲಸಕ್ಕೆ ಸೇರಿದರು. ವಾರ್ಷಿಕವಾಗಿ 9.30 ಲಕ್ಷ ರೂ. ವೇತನ ಪಡೆದುಕೊಳ್ಳುತ್ತಿದ್ದರು. ಆದರೆ, ಅಮೆರಿಕದಲ್ಲಿರುವ ಮ್ಯಾನೇಜರ್ ರಾಜ್ಕಿರಣ್ ಪನುಗಂಟಿ ಎಂಬುವವರ ಕಿರುಕುಳದಿಂದ ಹಲವರು ಕೆಲಸ ಬಿಟ್ಟಿದ್ದರು. ಬಳಿಕ ಅವರೆಲ್ಲರ ಕೆಲಸವನ್ನೂ ನಿಖಿಲ್ ಒಬ್ಬರೇ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಇದೀಗ ಮ್ಯಾನೇಜರ್ ನೀಡಿದ ದೌರ್ಜನಕ್ಕೆ ಯುವ ಇಂಜಿನಿಯರ್ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫೈನಾನ್ಷಿಯಲ್ ಎಕ್ಸ್ಪ್ರೆಸ್ನಲ್ಲಿ ಈ ಬಗ್ಗೆ ವರದಿಯಾಗಿದ್ದು, ಒಲಾ ಕೃತ್ರಿಮ್ ಕಂಪನಿಯ ಮಾಜಿ ಉದ್ಯೋಗಿಯೊಬ್ಬರ ಹೇಳಿಕೆಯನ್ನೂ ಉಲ್ಲೇಖಿಸಲಾಗಿದೆ. ನಿಖಿಲ್ ಅವರು ಸಾಯುವ ಎರಡು ವಾರದ ಮುಂಚೆಯೇ ಆಫೀಸ್ಗೆ ಹೋಗುವುದನ್ನು ನಿಲ್ಲಿಸಿದ್ದರು. ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಆ ವ್ಯಕ್ತಿ ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿದೆ.
ನಿಖಿಲ್ ಸೋಮವಂಶಿ ಅವರು ಸಾವನ್ನಪ್ಪಿರುವುದನ್ನು ಕಂಪನಿಯೂ ಖಚಿತಪಡಿಸಿದೆ. ಆದರೆ, ನಿಖಿಲ್ ಸಾವಿನಿಂದ ಬಹಳ ಬೇಸರವಾಗಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾಗಿ ವರದಿಯಲ್ಲಿ ಬರೆಯಲಾಗಿದೆ.
ಡಿದ್ದರು ಎಂದು ಕಂಪನಿಯ ವಕ್ತಾರರು ಹೇಳಿದ್ದಾರೆ.
ಆದರೆ, ಈ ಘಟನೆ ಬಗ್ಗೆ ರೆಡ್ಡಿಟ್ ಪೋಸ್ಟ್ ಮತ್ತು ಫೈನಾನ್ಷಿಯಲ್ ಎಕ್ಸ್ಪ್ರೆಸ್ ವರದಿ ಬಿಟ್ಟರೆ ಬೇರೆಲ್ಲೂ ಮಾಹಿತಿ ಇಲ್ಲ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯಾ ಗೊತ್ತಿಲ್ಲ.