newsics.com
ಬೆಂಗಳೂರು : ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ನೆಚ್ಚರಿಕೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಉದ್ಯೋಗಿಗಳ ಹಿತದೃಷ್ಟಿಯಿಂದ ಇಂದೂ ಕೂಟ ಐಟಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಮನೆಯ ಗೋಡೆ ಕುಸಿದು ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಶಶಿಕಲಾ ಸಾವನ್ನಪ್ಪಿದ್ದಾರೆ. ಮೋಟಾರ್ ನಿಂದ ಮಳೆ ನೀರು ತೆರವು ಮಾಡಲು ಹೋಗಿ ಕರೆಂಟ್ ಶಾಕ್ ನಿಂದ 12ರ ಬಾಲಕ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ.
ಮೃತರ ಕುಟುಂಬಗಳಿಗೆ ಬಿಬಿಎಂಪಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷರು. ಪರಿಹಾರಘೋಷಿಸಲಾಗಿದೆ.