newsics.com
ಬೆಂಗಳೂರು: ಮಳೆ ಅವಾಂತರಕ್ಕೆ ಮತ್ತೊಂದು ಬಲಿ. ಬೈಕ್ ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ
ಕೋರಮಂಗಲದಲ್ಲಿ ನಡೆದಿದೆ. ಆಡುಗೋಡಿ ನಿವಾಸಿ ಮೂಡಲಗಿರಿ(50) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ.
ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಮೂಡಲಗಿರಿ ಅವರು ಕೋರಮಂಗಲದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆಯಲ್ಲೇ ಮರ ಬಿದ್ದು ಮೃತಪಟ್ಟಿದ್ದಾರೆ.
ಇದರೊಂದಿಗೆ ಬೆಂಗಳೂರಿನಲ್ಲಿ ಮಳೆ ಅವಾಂತರದಿಂದ ನಾಲ್ವರು ಮೃತಪಟ್ಟಿದ್ದಾರೆ. ಎಂಎಸ್ ಪಾಳ್ಯದ ಅಪಾರ್ಟ್ಮೆಂಟ್ ಬೇಸ್ ಮೆಂಟ್ ನಲ್ಲಿ ನಲ್ಲಿ ನೀರು ಹೊರ ಹಾಕುವಾಗ ವಿದ್ಯುತ್ ಶಾಕ್ ನಿಂದ ಮನಮೋಹನ ಕಾಮತ್ ಮತ್ತು ದಿನೇಶ್ ಮೃತಪಟ್ಟಿದ್ದರು.