newsics.com
ಬೆಂಗಳೂರು : ಇದೇ ಮೊದಲ ಬಾರಿಗೆ ಕನ್ನಡದ ಸಾಹಿತಿ ಲೇಖಕಿ, ಹೋರಾಟಗಾರ್ತಿ ಮತ್ತು ವಕೀಲರಾದ ಬಾನುಮುಷ್ತಾಕ್ ಗೆ ಪ್ರತಿಷ್ಠಿತಿ ಬೂಕರ್ ಪ್ರಶಸ್ತಿ ಲಭಿಸಿದೆ.
ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನವು ಲಂಡನ್ನಿನಲ್ಲಿ ನಡೆದ ಸಮಾರಂಭದಲ್ಲಿ 50,000 ಪೌಂಡ್ಸ್ ಮೌಲ್ಯದ ಇಂಟರ್ನ್ಯಾಷನಲ್ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಕೃತಿಯಾಗಿದೆ.
ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದ್ದು,
ಖ್ಯಾತ ಕನ್ನಡ ಲೇಖಕಿ ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.
ಮೇ 2024 ಮತ್ತು ಏಪ್ರಿಲ್ 2025 ರ ನಡುವೆ UK ಮತ್ತು ಐರ್ಲೆಂಡ್ನಲ್ಲಿ ಪ್ರಕಟವಾದ ಇಂಗ್ಲಿಷ್ಗೆ ಅನುವಾದಿಸಲಾದ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ.