newsics.com
ಚಿಕ್ಕಮಗಳೂರು: ನಾವು ಹೊಸ ಸ್ಥಳಗಳಿಗೆ ಹೋಗುತ್ತಿದ್ದೇವೆ ಎಂದರೆ, ಮೊದಲು ಪರಿಚಯಸ್ಥರ ಬಳಿ ಆ ಮಾರ್ಗದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೆವು. ಇಲ್ಲ ಎಂದರೆ ಆ ರೂಟ್ ಗೊತ್ತಿರುವವರನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದೆವು. ಆದರೆ ಈಗ ಕಾಳ ಬದಲಾಗಿದ್ದು, ಗೊತ್ತಿಲ್ಲದ ಸ್ಥಳಿಗೂ ಕೂಡ ಸುಲಭವಾಗಿ ತಲುಪಲು ನ್ಯಾವಿಗೇಷನ್ ಮ್ಯಾಪ್ ಗಳು ಸಹಾಯ ಮಾಡುತ್ತಿದೆ. ಅದರಲ್ಲೂ ಭಾರತದಲ್ಲಿ ಈಗ ಗೂಗಲ್ ಪ್ಯಾಪ್ ಬಳಕ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕೆಲವೊಮ್ಮೆ ಗೂಗಲ್ ಮ್ಯಾಪ್ ನೋಡಿ ನಂಬಿ ಪರದಾಡುವ ಸ್ಥಿತಿ ಎದುರಾಗುತ್ತದೆ. ಇದಕ್ಕೆ ತಾಜಾ ಉದಾಹರಣೆಯಂತೆ ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.
ತಕ್ಷಣವೇ ಸ್ಥಳೀಯರು ಪ್ರವಾಸಿಗರ ನೆರವಿಗೆ ಧಾವಿಸಿದ್ದಾರೆ ಕೂಡಲೇ ಟ್ರ್ಯಾಕ್ಟರ್ ಒಂದನ್ನು ತಂದು ಅದಕ್ಕೆ ಹಗ್ಗ ಕಟ್ಟಿ ಗದ್ದೆಯಿಂದ ಟಿಟಿಯನ್ನು ರಸ್ತೆಗೆ ಎಳೆದು ತಂದಿದ್ದಾರೆ ಬಳಿಕ ಸ್ಥಳೀಯ ಮಾಹಿತಿ ಪಡೆದುಕೊಂಡು ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.