newsics.com
ರಾಯಚೂರು : ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.ಈ ಮೂಲಕ ಮಳೆಗೆ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ಜಮೀನಿನಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ದೇವಕಿ ಮ್ಯಾಗೇರಿ (40) ಸಾವನ್ನಪ್ಪಿದ್ದಾರೆ.
ಮಳೆ ನಿಂತ ನಂತರ ಗ್ರಾಮಸ್ಥರು ಸ್ಥಳಕ್ಕೆ ಓಡಿ ಹೋಗಿ ನೋಡಿದಾಗ ಸಿಡಿಲು ಬಡಿದು ದೇವಕಿ ಮೃತಪಟ್ಟಿರುವುದು ತಿಳಿದುಬಂದಿದೆ.