newsics.com
ಕಾರವಾರ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಟಾ ತಾಲೂಕಿನಲ್ಲಿ ಮತ್ತೆ ಭಾರೀ ಗುಡ್ಡ ಕುಸಿತ ಉಂಟಾಗಿದೆ.
ಕುಮಟಾದ ರಾಷ್ಟ್ರೀಯ ಹೆದ್ದಾರಿಯಿಂದ ಮಿರ್ಜಾನ- ಕತಗಾಲ ತೆರಳುವ ರಸ್ತೆಯಲ್ಲಿ ಖೈರೆ ಬಳಿ ಗುಡ್ಡ ಕುಸಿದಿದ್ದರಿಂದಾಗಿ ತಾತ್ಕಾಲಿಕವಾಗಿ ರಸ್ತೆ ಬಂದ್ ಮಾಡಲಾಗಿದೆ.
ಖೈರೆ ಗುಡ್ಡ ಹಂತ ಹಂತವಾಗಿ ಕುಸಿದು ಸಂಪೂರ್ಣ ಗುಡ್ಡದೊಂದಿಗೆ ರಸ್ತೆಯು ಕುಸಿಯುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ.
ಈ ರಸ್ತೆಯಲ್ಲಿ ಸತತವಾಗಿ ವಾಹನಗಳು ಸಂಚರಿಸುತ್ತಿದ್ದು ಗುಡ್ಡಕುಸಿತದಲ್ಲಿ ಪ್ರಾಣಾಪಾಯವಾಗುವ ಸಾಧ್ಯತೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ರಸ್ತೆಯನ್ನು ಮುಚ್ಚಲಾಗಿದೆ.
ಈ ರಸ್ತೆಯ ಬದಲು ಕತಗಾಲದಿಂದ ಸಂಚರಿಸುವವರು ಬದಲಿ ರಸ್ತೆ ಕತಗಾಲ- ದಿವಗಿ- ಮಿರ್ಜಾನ ಮೂಲಕ ಹಾಗೂ ಮಿರ್ಜಾನದಿಂದ ಸಂಚರಿಸುವವರು ಬದಲಿ ರಸ್ತೆ ಮಿರ್ಜಾನ- ದಿವಗಿ- ಕತಗಾಲ ಮೂಲಕ ಸಂಚರಿಸಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ.
ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಬುಧವಾರ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದೆ.
ರಾಷ್ಟ್ರೀಯ ಹೆದ್ದಾರಿ 766Eರಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲುಗಳನ್ನು ಒಡೆಯಲಾಗಿತ್ತು. ಈಗ ಮಳೆಯ ಪರಿಣಾಮ ಹೆಚ್ಚಾಗಿದ್ದರಿಂದ ಈ ಪ್ರದೇಶದಲ್ಲಿ ಭೂಕುಸಿತವಾಗಿದೆ.
ಕುಸಿತದ ಪರಿಣಾಮ ಬಂಡೆಗಳು ರಸ್ತೆಯ ಮೇಲೆ ಬಿದ್ದಿವೆ. ಕಳೆದ ವರ್ಷವೂ ಈ ಪ್ರದೇಶದಲ್ಲಿ ಕುಸಿತವಾಗಿತ್ತು ಈಗ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾದರೆ, ಕುಸಿತದ ಭೀತಿಯು ಮತ್ತಷ್ಟು ಹೆಚ್ಚಾಗಲಿದೆ.
Rain Alert ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್