newsics.com
ಮೈಸೂರು: ತಮ್ಮ ಹಿರಿಯ ಪುತ್ರಿ ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ಹೋಗಿದ್ದರಿಂದಲೇ ಮನನೊಂದು ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಜಿಲ್ಲೆಯ ಹೆಚ್.ಡಿ.ಕೋಟೆಯ ಬೂದನೂರಿನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಒಂದೇ ಕುಟುಂಬದ ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ (ಹೆಸರುಗಳನ್ನು ಬದಲಾಯಿಸಲಾಗಿದೆ) ಎಂದು ಗುರುತಿಸಲಾಗಿದೆ.

ಮೃತ ಮಹದೇವಸ್ವಾಮಿಯವರ ಹಿರಿಯ ಪುತ್ರಿ ಅರ್ಪಿತ ಎಂಬುವವರು ಮನೆಯವರ ವಿರೋಧದ ನಡೆವೆಯೂ ತಾನು ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ತಿಳಿದುಬಂದಿದೆ.
ಇದರಿಂದ ಮನನೊಂದು ಅರ್ಪಿತಾಳ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೂದನೂರು ಕೆರೆ ಏರಿಯ ಮೇಲೆ ದ್ವಿಚಕ್ರ ವಾಹನ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ಸದ್ಯ ಮೃತ ದೇಹಗಳಿಗಾಗಿ ಅಗ್ನಿ ಶಾಮಕದಳ ಶೋಧ ನಡೆಸಿದೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.