newsics.com
ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕನ್ನಡಪರ ಸಂಘಟನೆಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ. ಇದೀಗ ಕನ್ನಡ ಸಿನಿಮಾ ತಾರೆಯರೂ ಈ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ (Mysore Sandal Soap) ರಾಯಭಾರಿಯಾಗಿ ತಮನ್ನಾ ಆಯ್ಕೆ ಬಗ್ಗೆ ನಟಿಯರಾದ ರಮ್ಯಾ, ಕಾರುಣ್ಯಾ ರಾಮ್ ಪ್ರತಿಕ್ರಿಯಿಸಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ಗೆ ರಾಯಭಾರಿಗಳೇ ಬೇಕಿಲ್ಲ. ಇದಕ್ಕೆ ಸುಮ್ನೆ ದುಡ್ಡು ವೇಸ್ಟ್ ಮಾಡಿದಂತೇನೆ ಬಿಡಿ. ಕಾರಣ, ಮೈಸೂರು ಸ್ಯಾಂಡಲ್ ಸೋಪ್ಗೆ ಪ್ರತಿ ಕನ್ನಡಿಗರೂ ರಾಯಭಾರಿಗಳೇ ಆಗಿದ್ದಾರೆ. ಹಾಗಾಗಿಯೇ ರಾಯಭಾರಿಗಳು ಬೇಕಿಲ್ಲ ಎಂದು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಹೇಳಿದ್ದಾರೆ.
ನಟಿ ಕಾರುಣ್ಯ ರಾಮ್ ಅವರು ಟ್ವೀಟ್ನಲ್ಲಿ, ಮೈಸೂರ್ ಸ್ಯಾಂಡಲ್ ಸೋಪ್ ಕನ್ನಡಿಗರ ಹೆಮ್ಮೆಯ ಉತ್ಪನ್ನ. ಇಂಥಾ ಉತ್ಪನ್ನದ ಪ್ರಚಾರಕ್ಕೆ ಕನ್ನಡದ ಒಬ್ಬ ನಟಿಯೂ ಸಿಗಲಿಲ್ವಾ..? ಪರಭಾಷೆಯ ನಟಿಯಿಂದಲೇ ಪ್ರಚಾರ ಬೇಕಾ..? ಕನ್ನಡದಲ್ಲಿ ಪ್ರತಿಭೆಗಳಿಗೆ ಕೊರತೆ ಇದೆಯಾ..? ದಯಮಾಡಿ ನಮ್ಮ ನಾಡಿನ ಪ್ರತಿಭೆಗಳಿಗೆ ಮೊದಲ ಆದ್ಯತೆ ಕೊಡಿ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ತನ್ನ ಬ್ರ್ಯಾಂಡ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಿಸಿದೆ. ಈ ಸಂಬಂಧ ಒಪ್ಪಂದ ನಡೆದಿದ್ದು ಅದರ ಖಚಿತ ಮಾಹಿತಿ ಹೊರಬಿದ್ದಿದೆ. ಇದೇ ಕಾರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ನಮ್ಮ ತೆರಿಗೆ ಹಣವನ್ನು ಯಾಕೆ ಬಾಲಿವುಡ್ ನಟಿಗೆ ಕೊಡಬೇಕು. ಅದು ಕೂಡ 2 ವರ್ಷಕ್ಕೆ 6.20 ಕೋಟಿ ರೂ. ಎಂದು ಅಸಮಾಧಾನ ವ್ಯಕ್ತವಾಗುತ್ತಿದೆ.
ಆ್ಯಪಲ್ಗೆ ರಾಯಭಾರಿಗಳೇ ಇಲ್ಲ. ಡವ್ ಸೋಪ್ ಕೂಡ ಹಾಗೇ ಅಲ್ವೇ? ಇದಕ್ಕೂ ಪೇಡ್ ರಾಯಭಾರಿಗಳು ಯಾರೂ ಇಲ್ಲ. ಹಾಗಂತಲೂ ತಮ್ಮ ಅಭಿಪ್ರಾಯವನ್ನು ರಮ್ಯಾ, ಇನ್ಸ್ಟಾಗ್ರಾಮ್ನ ತಮ್ಮ ಸ್ಟೇಟಸ್ನಲ್ಲಿಯೇ ಬರೆದುಕೊಂಡಿದ್ದಾರೆ.