newsics.com
ಕೊಡಗು: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಮುಂದುವರಿದು, ಮಳೆಯ ಆರ್ಭಟದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಹೀಗಾಗಿ ಮೇ 26, 27ರಂದು ಎರಡು ದಿನಗಳ ಕಾಲ ಮಹಾವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾವಿದ್ಯಾಲಯಗಳಿಗೆ ಎರಡು ದಿನ ರಜೆ ಘೋಷಿಸಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ಧಾರಕಾರವಾಗಿ ಮಳೆಯಾಗುತ್ತಿರುವ ಪರಿಣಾಮದಿಂದ ತ್ರಿವೇಣಿ ಸಂಗಮದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಅಲ್ಲದೇ ಕ್ಷಣಕ್ಕೂ ಕ್ಷಣಕ್ಕೂ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ.