newsics.com
ನವದೆಹಲಿ: ವಾಡಿಕೆಗಿಂತ ಮೊದಲೇ ಹಲವು ರಾಜ್ಯಗಳಿಗೆ ನೈಋತ್ಯ ಮುಂಗಾರು ಆಗಮನವಾಗಿದೆ. ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದ ಬಳಿಕ ಮಹಾರಾಷ್ಟ್ರಕ್ಕೆ ಮುಂಗಾರು ಆಗಮನವಾಗಿದೆ. ಮುಂದಿನ ಎರಡು ದಿನಗಳಲ್ಲಿ ಮುಂಬೈ ತಲುಪಬಹುದು, ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ ಮಧ್ಯ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳು, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ, ಮಧ್ಯ ಮತ್ತು ಉತ್ತರ ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ.
ಇಂದು ಎಲ್ಲೆಲ್ಲಿ ಮಳೆಯಾಗಲಿದೆ?
ಕರಾವಳಿ ಕರ್ನಾಟಕ, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಹಾಗೂ ಕಾರೈಕಲ್ನಲ್ಲಿ ವಿಪರೀತ ಮಳೆ ಸುರಿಯಲಿದೆ. ಅಂಡಮಾನ್ ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡಿನಲ್ಲೂ ಭಾರಿ ಮಳೆಯಾಗಲಿದೆ.
Rashmika Mandanna ಕುಬೇರ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ