newsics.com
ನವದೆಹಲಿ: ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶವಿಲ್ಲದೆ ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎಂಬುವರ ಆಯ್ಕೆಯನ್ನು ಕೋರ್ಟ್ ಮರುಸ್ಥಾಪಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ರಸ್ತೆಯ ಬದಿಯಲ್ಲಿ ಕೆಲವರ ಜೊತೆಯಾಗಿ ಇಸ್ಪೀಟು ಆಡುತ್ತಿದ್ದ ಹನುಮಂತರಾಯಪ್ಪ ಅವರಿಗೆ ಯಾವುದೇ ವಿಚಾರಣೆ ನಡೆಸದೆ ₹200 ದಂಡ ವಿಧಿಸಲಾಗಿತ್ತು.
ಹನುಮಂತರಾಯಪ್ಪ ಅವರು ಜೂಜಾಡುವ ಅಭ್ಯಾಸ ಬೆಳೆಸಿಕೊಂಡ ವ್ಯಕ್ತಿ ಅಲ್ಲ ಎಂದು ಪೀಠವು ಹೇಳಿದೆ. ‘ಇಸ್ಪೀಟು ಆಟದಲ್ಲಿ ಹಲವು ಬಗೆಗಳಿವೆ. ಆದರೆ, ಅಂತಹ ಪ್ರತಿ ಬಗೆಯೂ, ಅದರಲ್ಲೂ ಮುಖ್ಯವಾಗಿ ಮನರಂಜನೆಗಾಗಿ ಹಾಗೂ ವಿನೋದಕ್ಕಾಗಿ ಆಡುವುದು, ನೈತಿಕವಾದ ಅಧಃಪತನಕ್ಕೆ ಒಯ್ಯುವಂಥದ್ದು ಎಂಬುದನ್ನು ಒಪ್ಪಿಕೊಳ್ಳುವುದು ಕಷ್ಟ. ವಾಸ್ತವದಲ್ಲಿ, ನಮ್ಮ ದೇಶದ ಹಲವು ಕಡೆಗಳಲ್ಲಿ ಜೂಜು ಅಥವಾ ಬೆಟ್ಟಿಂಗ್ನ ಲವಲೇಶವೂ ಇಲ್ಲದೆ ಇಸ್ಪೀಟು ಆಡುವುದು ಬಡವರ ಮನರಂಜನಾ ಮಾರ್ಗ ಎಂದು ಒಪ್ಪಿತವಾಗಿದೆ’ ಎಂದು ಹೇಳಿದೆ.
ಹನುಮಂತರಾಯಪ್ಪ ಅವರು ಜೂಜಿನ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದರು ಎಂದು ಚುನಾವಣೆಯಲ್ಲಿ ಹನುಮಂತರಾಯಪ್ಪ ವಿರುದ್ಧ ಸೋತಿದ್ದ ರಂಗನಾಥ ಬಿ. ಎನ್ನುವವರು ಸಹಕಾರ ಸಂಘಗಳ ಜಂಟಿ ನಿಬಂಧಕರಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ನೈತಿಕ ಅಧಃಪತನದ ತಪ್ಪಿನಲ್ಲಿ ಹನುಮಂತರಾಯಪ್ಪ ಭಾಗಿಯಾಗಿದ್ದಾರೆ ಎಂಬ ಕಾರಣ ನೀಡಿ ಹನುಮಂತರಾಯಪ್ಪ ಅವರ ಆಯ್ಕೆಯನ್ನು ರದ್ದುಪಡಿಸಲಾಗಿತ್ತು. ಆಯ್ಕೆ ರದ್ದುಪಡಿಸಿದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಹನುಮಂತರಾಯಪ್ಪ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.
Shocking incident ರಾಯರ ಮಠದೊಳಗೆ ಚಪ್ಪಲಿ ಎಸೆದು ಮಹಿಳೆ ಪರಾರಿ: ಭಕ್ತರಿಗೆ ಆಘಾತ, ಕ್ರಮಕ್ಕೆ ಆಗ್ರಹ
Tender work ಟೆಂಡರ್ ವರ್ಕ್ ಆರ್ಡರ್ : ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸ್ ದಾಖಲು.!
Mobile ಈಗ ನಿಮ್ಮ ಫೋನ್ ಮನುಷ್ಯರಂತೆ ನಿಮ್ಮೊಂದಿಗೆ ಮಾತನಾಡುತ್ತದೆ! ಹೇಗೆ ಗೊತ್ತಾ?