Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Cm vs DCM ಇಂಜಿನಿಯರ್‌ಗಳ ವರ್ಗಾವಣೆ: ಸಿಎಂ- ಡಿಸಿಎಂ ಮಧ್ಯೆ ಸಂಘರ್ಷ, ಸಿಎಸ್‌ಗೆ ಪತ್ರ ಬರೆದ ಡಿಕೆಶಿ
ಪ್ರಮುಖ

Cm vs DCM ಇಂಜಿನಿಯರ್‌ಗಳ ವರ್ಗಾವಣೆ: ಸಿಎಂ- ಡಿಸಿಎಂ ಮಧ್ಯೆ ಸಂಘರ್ಷ, ಸಿಎಸ್‌ಗೆ ಪತ್ರ ಬರೆದ ಡಿಕೆಶಿ

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಮುಸುಕಿನ ಗುದ್ದಾಟ ಶುರುವಾಗಿದೆ. ಅಧಿಕಾರಿಗಳ ವರ್ಗಾವಣೆ ಸಂಬಂಧ ಇಬ್ಬರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಕ್ರೋಶಗೊಂಡಿದ್ದು, ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯಲ್ಲಿದ್ದ ಇಂಜಿನಿಯರ್‌ಗಳನ್ನು ಜಲಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳು ಬದಲಾವಣೆಯಾಗಿದ್ದರು. ಸದ್ಯ ಜಲಸಂಪನ್ಮೂಲ ಖಾತೆಯನ್ನು ಹೊಂದಿರುವ ಡಿಕೆ ಶಿವಕುಮಾರ್ ಅವರ ಅನುಮತಿ ಪಡೆಯದೆ ವರ್ಗಾವಣೆ ಮಾಡಲಾಗಿದೆ ಇದು ಡಿಸಿಎಂ ಕೋಪಕ್ಕೆ ಕಾರಣವಾಗಿದೆ.

ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿಕೆ ಶಿವಕುಮಾರ್‌ ಪತ್ರ ಬರೆದಿದ್ದು, ಕಾಂಗ್ರೆಸ್ ಸರ್ಕಾರ ರಚನೆಯಾದಾಗ ಸಂಪುಟ ಸಹೋದ್ಯೋಗಿಗಳ ನಡುವೆ ಒಂದು ಒಪ್ಪಂದವಾಗಿತ್ತು. ನನ್ನ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆ ಅಥವಾ ನೇಮಕಾತಿಗಳನ್ನು ನನ್ನ ಸ್ಪಷ್ಟ ಅನುಮೋದನೆ ಇಲ್ಲದೆ ಮಾಡಬಾರದು. ಈ ವರ್ಗಾವಣೆಗಳನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರದೆ ಮಾಡಲಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ

ಹಲವು ತಿಂಗಳುಗಳುಗಳಿಂದ ಜಲಸಂಪನ್ಮೂಲ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ಐವರು ಮುಖ್ಯ ಎಂಜಿನಿಯರ್‌ಗಳು ಹುದ್ದೆಯ ನಿರೀಕ್ಷೆಯಲ್ಲಿದ್ದರು. ಐವರು ಎಂಜಿನಿಯರ್‌ಗಳನ್ನು ಖಾಲಿ ಇದ್ದ ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ವರ್ಗಾವಣೆ ಮಾಡಿ ಮೇ 9ರಂದು ಡಿಪಿಎಆರ್ ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್‌ಗಳು ಕರ್ತವ್ಯಕ್ಕೆ ಹಾಜರಾಗಿದ್ದರು.

ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು, ಪ್ರಭಾರ ವರ್ಗಾವಣೆ ಪ್ರಮಾಣ ಪತ್ರವನ್ನು (ಸಿಟಿಸಿ) ಸಲ್ಲಿಸಬೇಕು ಎಂದೂ ಡಿಪಿಎಆರ್ ನಿರ್ದೇಶನ ನೀಡಿತ್ತು. ಅದರ ಅನ್ವಯ ಎಲ್ಲಾ ಐವರು ಎಂಜಿನಿಯರ್‌ಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು.

https://x.com/RAshokaBJP/status/1928009923444756978

TAGGED:#ChiefMinister #Siddaramaiah #DeputyChiefMinister #DKShivakumar #political
Share This Article
Facebook Twitter Copy Link Print
Previous Article Viral ನದಿಯಲ್ಲಿ ಸಿಲುಕಿಕೊಂಡಿದ್ದ ಟೊಯೋಟೊ ಫಾರ್ಚುನರ್ ಕಾರನ್ನು ಕ್ಷಣದಲ್ಲೇ ಎಳೆದ ಆನೆ – ವೈರಲ್ ವಿಡಿಯೋ ನೋಡಿ
Next Article Abdul Rahim Case ಮುಸ್ಲಿಂ ಮುಖಂಡರ ಸಭೆಯಲ್ಲಿ ಗದ್ದಲ – ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?