newsics.com
ಮಂಗಳೂರು : ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐದು ಮಂದಿ ಅವಶೇಷಗಳಡಿ ಸಿಲುಕಿದ್ದ ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ.
ಇನ್ನು ಗುಡ್ಡ ಕುಸಿತದಿಂದ ಮನೆ ಬಿದ್ದು ಅವಶೇಷಗಳಡಿ ತಾಯಿ, ಮಗು ಸಿಲುಕಿದ್ದು, 8 ಗಂಟೆಗಳಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮವಾಗಿ ಮನೆ ಕುಸಿದಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.