newsics.com
ಬೆಂಗಳೂರು: ಶರವೇಗದಲ್ಲಿ ಹೆಚ್ಚಾಗ್ತಿರೋ ಕೊರೊನಾ ಕೇಸ್ಗಳು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಶುಕ್ರವಾರ (ಮೇ 30) ಕೂಡ ಒಂದು ಬಲಿ ಪಡೆದಿದೆ.
ಮೈಸೂರಲ್ಲಿ 63 ವರ್ಷ ಪುರುಷ ಕೊವಿಡ್ ಗೆ ಬಲಿಯಾಗಿದ್ದಾನೆ. ಈ ಮೂಲಕ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಮುಂಗಾರಿನ ಎಂಟ್ರಿ ಆಗಿರೋದರಿಂದ ಕೋವಿಡ್ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 24 ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿತ ಸಂಖ್ಯೆ 114 ಕೊರೊನಾ ಪ್ರಕರಣಗಳೊಂದಿಗೆ 367ಕ್ಕೆ ಏರಿಕೆಯಾಗಿದೆ.
ಮೈಸೂರಿನ 63 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಕಿಡ್ನಿ ವೈಫಲ್ಯವಾಗಿ ಮೇ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೇ 25ರಂದು ಮೃತಪಟ್ಟಿದ್ದಾರೆ. ಬಳಿಕ ಮೃತಪಟ್ಟ ವ್ಯಕ್ತಿಯ ಕೊವಿಡ್ ರಿಪೋರ್ಟ್ ಪಾಸಿಟಿವ್ ಎಂಬ ವರದಿ ಬಂದಿದೆ.
ಕೋವಿಡ್ ಟೆಸ್ಟ್ ಕಡ್ಡಾಯ
ಕೋವಿಡ್
ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕೊವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿದ್ದು, ಸ್ವ್ಯಾಬ್ ಪಡೆದ ದಿನವೇ ಪ್ರಯೋಗಾಲಯಕ್ಕೆ ಕಳಿಸಬೇಕು ಎಂದು ಸೂಚಿಸಿದೆ.
ಜೂನ್ ತಿಂಗಳಲ್ಲಿ ಮಳೆಗಾಲದ ಜತೆಗೆ ವಾತಾವರಣದ ಉಷ್ಣಾಂಶ ಕೂಡ ತಗ್ಗಲ್ಲಿದ್ದು, ಸೋಂಕು ಮತ್ತಷ್ಟು ಹೆಚ್ಚಾಗೋ ಸಾಧ್ಯತೆಯಿದೆ. ಶಾಲೆಗಳು ಕೂಡ ಆರಂಭವಾಗಿದ್ದು, ಮಕ್ಕಳಿಗೆ ಸೋಂಕು ಹರಡದಂತೆ ಪೋಷಕರು ಎಚ್ಚರಿಕೆ ವಹಿಸಬೇಕಿದೆ.
School Holiday ಭಾರೀ ಮಳೆ ಹಿನ್ನಲೆ – ನಾಳೆ ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ