newsics.com
ಬೆಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೂನ್ 4ರಿಂದ ಮಳೆ ಕೊಂಚ ಹೆಚ್ಚಾಗಬಹುದು.
ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಮಾಣಿ, ಬಂಟವಾಳ, ಭಾಗಮಂಡಲ, ಧರ್ಮಸ್ಥಳ, ನಾಪೋಕ್ಲು, ಶಕ್ತಿನಗರ, ವಿರಾಜಪೇಟೆ, ಕಾರ್ಕಳ, ಚಿಕ್ಕಬಳ್ಳಾಪುರ, ಪೊನ್ನಂಪೇಟೆ, ಹಾರಂಗಿ, ಕೊಟ್ಟಿಗೆಹಾರ, ಶೃಂಗೇರಿ, ಜಯಪುರ, ಕೋಟಾ, ಮುಲ್ಕಿ, ಸಿದ್ದಾಪುರ, ಗೇರುಸೊಪ್ಪದಲ್ಲಿ ಮಳೆಯಾಗಿದೆ.