newsics.com
ಬೆಂಗಳೂರು : ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಎಪ್ ಐಆರ್ ರದ್ದುಗೊಳಿಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ವಾದ ಮಂಡಿಸಲಾಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯ ಪೀಠವು, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೆ ದೋಷಾರೋಪ ಪಟ್ಟಿ ಸಲ್ಲಿಸುವಂತಿಲ್ಲ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತ ನ್ಯಾ.ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.